<p>ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದನ್ನು ಗಂಭೀರ<br />ವಾಗಿ ಪರಿಗಣಿಸಿರುವ ಪೊಲೀಸರು, ನಿಯಮ ಉಲ್ಲಂಘನೆ ಮಾಡುವವರ ವಾಹನ ಜಪ್ತಿ ಮಾಡಿ ನಿಯಮಗಳ ಬಗ್ಗೆ ತರಬೇತಿ ಕೊಡಿಸಲು ಮುಂದಾಗಿದ್ದಾರೆ.</p>.<p>10ಕ್ಕಿಂತ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಮಾಡಿದವರನ್ನು ಪತ್ತೆ ಮಾಡಿ, ಅವರ ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ.</p>.<p>ಅದೇ ಸವಾರ ಹಾಗೂ ಚಾಲಕರಿಗೆ, ಥಣಿಸಂದ್ರದಲ್ಲಿರುವ ಸಂಚಾರ ತರಬೇತಿ ಮತ್ತು ರಸ್ತೆ ಸುರಕ್ಷತಾ ಸಂಸ್ಥೆಯಲ್ಲಿ<br />ತರಬೇತಿ ಕೊಡಿಸುತ್ತಿದ್ದಾರೆ. 100ಕ್ಕೆ 60ಅಂಕ ಪಡೆದವರನ್ನು ಮಾತ್ರ ಉತ್ತೀರ್ಣಗೊಳಿಸಿ, ವಾಹನ ಬಿಡುಗಡೆ ಮಾಡುತ್ತಿದ್ದಾರೆ. ತರಬೇತಿ ಖಚಿತಪಡಿಸುವ ಪ್ರಮಾಣ ಪತ್ರಗಳನ್ನೂ ನೀಡುತ್ತಿದ್ದಾರೆ.</p>.<p>ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್.ರವಿಕಾಂತೇಗೌಡ ಅವರ ನಿರ್ದೇಶನದಂತೆ ಈ ಹೊಸ ಪ್ರಯೋಗವನ್ನು ಜಾರಿಗೆ ತರಲಾಗಿದೆ.</p>.<p>‘ಬಹುತೇಕರು ಸಾರಿಗೆ ಇಲಾಖೆಯಿಂದ ಚಾಲನಾ ಪರವಾನಗಿ ಪತ್ರ ಪಡೆದಿರುತ್ತಾರೆ. ಆ ಪೈಕಿ ಹಲವರು, ಸಂಚಾರ ನಿಯಮ ಉಲ್ಲಂಘಿಸುತ್ತಿದ್ದಾರೆ. ಇದರಿಂದ ಅಪಘಾತಗಳು ಸಂಭವಿಸಿ, ಅಮಾಯಕರ ಪ್ರಾಣಗಳು ಹೋಗುತ್ತಿವೆ’ ಎಂದು ಸಂಚಾರ ವಿಭಾಗದ ಡಿಸಿಪಿ ನಾರಾಯಣ್ ತಿಳಿಸಿದರು.</p>.<p>‘ಒಂದು ವಾರದಲ್ಲಿ 180 ಜನರಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿಯನ್ನು ಪತ್ತೆ ಮಾಡಿ ತರಬೇತಿ ಕೊಡಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದನ್ನು ಗಂಭೀರ<br />ವಾಗಿ ಪರಿಗಣಿಸಿರುವ ಪೊಲೀಸರು, ನಿಯಮ ಉಲ್ಲಂಘನೆ ಮಾಡುವವರ ವಾಹನ ಜಪ್ತಿ ಮಾಡಿ ನಿಯಮಗಳ ಬಗ್ಗೆ ತರಬೇತಿ ಕೊಡಿಸಲು ಮುಂದಾಗಿದ್ದಾರೆ.</p>.<p>10ಕ್ಕಿಂತ ಹೆಚ್ಚು ಬಾರಿ ನಿಯಮ ಉಲ್ಲಂಘನೆ ಮಾಡಿದವರನ್ನು ಪತ್ತೆ ಮಾಡಿ, ಅವರ ವಾಹನಗಳನ್ನು ಜಪ್ತಿ ಮಾಡುತ್ತಿದ್ದಾರೆ.</p>.<p>ಅದೇ ಸವಾರ ಹಾಗೂ ಚಾಲಕರಿಗೆ, ಥಣಿಸಂದ್ರದಲ್ಲಿರುವ ಸಂಚಾರ ತರಬೇತಿ ಮತ್ತು ರಸ್ತೆ ಸುರಕ್ಷತಾ ಸಂಸ್ಥೆಯಲ್ಲಿ<br />ತರಬೇತಿ ಕೊಡಿಸುತ್ತಿದ್ದಾರೆ. 100ಕ್ಕೆ 60ಅಂಕ ಪಡೆದವರನ್ನು ಮಾತ್ರ ಉತ್ತೀರ್ಣಗೊಳಿಸಿ, ವಾಹನ ಬಿಡುಗಡೆ ಮಾಡುತ್ತಿದ್ದಾರೆ. ತರಬೇತಿ ಖಚಿತಪಡಿಸುವ ಪ್ರಮಾಣ ಪತ್ರಗಳನ್ನೂ ನೀಡುತ್ತಿದ್ದಾರೆ.</p>.<p>ಸಂಚಾರ ವಿಭಾಗದ ಜಂಟಿ ಕಮಿಷನರ್ ಬಿ.ಆರ್.ರವಿಕಾಂತೇಗೌಡ ಅವರ ನಿರ್ದೇಶನದಂತೆ ಈ ಹೊಸ ಪ್ರಯೋಗವನ್ನು ಜಾರಿಗೆ ತರಲಾಗಿದೆ.</p>.<p>‘ಬಹುತೇಕರು ಸಾರಿಗೆ ಇಲಾಖೆಯಿಂದ ಚಾಲನಾ ಪರವಾನಗಿ ಪತ್ರ ಪಡೆದಿರುತ್ತಾರೆ. ಆ ಪೈಕಿ ಹಲವರು, ಸಂಚಾರ ನಿಯಮ ಉಲ್ಲಂಘಿಸುತ್ತಿದ್ದಾರೆ. ಇದರಿಂದ ಅಪಘಾತಗಳು ಸಂಭವಿಸಿ, ಅಮಾಯಕರ ಪ್ರಾಣಗಳು ಹೋಗುತ್ತಿವೆ’ ಎಂದು ಸಂಚಾರ ವಿಭಾಗದ ಡಿಸಿಪಿ ನಾರಾಯಣ್ ತಿಳಿಸಿದರು.</p>.<p>‘ಒಂದು ವಾರದಲ್ಲಿ 180 ಜನರಿಗೆ ತರಬೇತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿಯನ್ನು ಪತ್ತೆ ಮಾಡಿ ತರಬೇತಿ ಕೊಡಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>