ಬೆಂಗಳೂರು: ವ್ಹೀಲಿಂಗ್ ಮಾಡುವುದಕ್ಕಾಗಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ನೆಲಮಂಗಲದ ಅಮೃತ್ ಗೌಡ (19) ಹಾಗೂ ಶ್ರೀನಿವಾಸ್ (23) ಬಂಧಿತರು. ಇವರಿಂದ ₹ 2 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಆರೋಪಿಗಳು, ವ್ಹೀಲಿಂಗ್ ಮಾಡುವ ಉದ್ದೇಶದಿಂದ ದ್ವಿಚಕ್ರ ವಾಹನ ಕದಿಯುತ್ತಿದ್ದರು. ಕೆಲ ದಿನ ವಾಹನಗಳಲ್ಲಿ ವ್ಹೀಲಿಂಗ್ ಮಾಡಿ, ನಂತರ ನಿರ್ಜನ ಪ್ರದೇಶಗಳಲ್ಲಿ ನಿಲ್ಲಿಸುತ್ತಿದ್ದರು’ ಎಂದು ತಿಳಿಸಿದರು.