ಬೆಂಗಳೂರು: ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿ ಅಬೂಬಕರ್ ಸಿದ್ದಿಕ್ (19) ಎಂಬುವವರನ್ನು ಹೆಣ್ಣೂರು ಪೊಲೀಸರು ಬಂಧಿಸಿದ್ದಾರೆ.
‘ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಜೆ.ಜೆ. ಕಾಲೊನಿ ನಿವಾಸಿ ಅಬೂಬಕರ್, ಹಲವು ವರ್ಷಗಳಿಂದ ಕೃತ್ಯ ಎಸಗುತ್ತಿದ್ದ. ಈತನಿಂದ ₹ 6.07 ಲಕ್ಷ ಮೌಲ್ಯದ 9 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.
‘ಹ್ಯಾಂಡಲ್ ಲಾಕ್ ಮುರಿದು ವಾಹನ ಕದಿಯುತ್ತಿದ್ದ ಆರೋಪಿ, ಅವುಗಳ ನೋಂದಣಿ ಫಲಕ ಬದಲಿಸಿ ಮಾರುತ್ತಿದ್ದ. ಕೆಲ ವಾಹನಗಳ ಬಿಡಿಭಾಗಗಳನ್ನೂ ಮಾಡಿ ಹಣ ಸಂಪಾದಿಸುತ್ತಿದ್ದ. ಹೆಣ್ಣೂರು, ಭಾರತಿನಗರ, ಪುಲಿಕೇಶಿನಗರ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚು ವಾಹನಗಳನ್ನು ಕದ್ದಿದ್ದ’ ಎಂದು ತಿಳಿಸಿದರು.