<p><strong>ಬೆಂಗಳೂರು</strong>: ಬ್ಯಾಡರಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪದಡಿ ಸಿ. ನಿಖಿಲ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಆಂಧ್ರಹಳ್ಳಿಯ ನಿಖಿಲ್, ಈ ಹಿಂದೆ ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ. ಜೈಲಿಗೆ ಹೋಗಿ ಜಾಮೀನು ಮೇಲೆ ಇತ್ತೀಚೆಗಷ್ಟೇ ಹೊರಗೆ ಬಂದಿದ್ದ. ಆತನಿಂದ ₹ 2.65 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಬ್ಯಾಡರಹಳ್ಳಿ ಪೊಲೀಸರು ಹೇಳಿದರು.</p>.<p>‘ಲಾಕ್ಡೌನ್ ಸಂದರ್ಭದಲ್ಲಿ ಅನಗತ್ಯವಾಗಿ ಸಂಚರಿಸುವ ವಾಹನಗಳ ತಪಾಸಣೆಗಾಗಿ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಚೆಕ್ಪೋಸ್ಟ್ ನಿರ್ಮಿಸಲಾಗಿದೆ. ಮೇ 25ರಂದು ಚೆಕ್ಪೋಸ್ಟ್ ಮೂಲಕ ಹೊರಟಿದ್ದ ಆರೋಪಿಯ ದ್ವಿಚಕ್ರ ವಾಹನ ತಡೆದು ತಪಾಸಣೆ ನಡೆಸಲಾಗಿತ್ತು.’</p>.<p>‘ವಾಹನಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಆರೋಪಿ ಹಾಜರುಪಡಿಸಿರಲಿಲ್ಲ. ಆತನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡ’ ಎಂದೂ ತಿಳಿಸಿದರು.</p>.<p class="Subhead"><strong>ಸ್ನೇಹಿತನ ಜೊತೆ ಕೃತ್ಯ: </strong>’ಹಲವು ವರ್ಷಗಳಿಂದ ಆರೋಪಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನೆ. ಸ್ನೇಹಿತನ ಜೊತೆ ಸೇರಿ ಮೊಬೈಲ್ ಕಲವು ಮಾಡುತ್ತಿದ್ದ ಬಗ್ಗೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಸ್ನೇಹಿತನ ಸಮೇತ ಬಂಧಿಸಿ 50ಕ್ಕೂ ಹೆಚ್ಚು ಮೊಬೈಲ್ ಜಪ್ತಿ ಮಾಡಲಾಗಿತ್ತು’ ಎಂದೂ ಪೊಲೀಸರು ಹೇಳಿದರು.</p>.<p>‘ಜೈಲಿನಿಂದ ಜಾಮೀನು ಮೇಲೆ ಹೊರಗೆ ಬಂದಿದ್ದ ಆರೋಪಿ, ವಾಹನ ಕಳ್ಳತನ ಮಾಡಲಾರಂಭಿಸಿದ್ದರು. ಮೇ 17ರಂದು ಆಂಧ್ರಹಳ್ಳಿಯ ಡಿ ಗ್ರೂಪ್ ಲೇಔಟ್ನಲ್ಲಿ ದ್ವಿಚಕ್ರ ವಾಹನ ಕದ್ದು ಪರಾರಿಯಾಗಿದ್ದ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬ್ಯಾಡರಹಳ್ಳಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಕಳವು ಮಾಡಿದ್ದ ಆರೋಪದಡಿ ಸಿ. ನಿಖಿಲ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>‘ಆಂಧ್ರಹಳ್ಳಿಯ ನಿಖಿಲ್, ಈ ಹಿಂದೆ ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ. ಜೈಲಿಗೆ ಹೋಗಿ ಜಾಮೀನು ಮೇಲೆ ಇತ್ತೀಚೆಗಷ್ಟೇ ಹೊರಗೆ ಬಂದಿದ್ದ. ಆತನಿಂದ ₹ 2.65 ಲಕ್ಷ ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಬ್ಯಾಡರಹಳ್ಳಿ ಪೊಲೀಸರು ಹೇಳಿದರು.</p>.<p>‘ಲಾಕ್ಡೌನ್ ಸಂದರ್ಭದಲ್ಲಿ ಅನಗತ್ಯವಾಗಿ ಸಂಚರಿಸುವ ವಾಹನಗಳ ತಪಾಸಣೆಗಾಗಿ ಠಾಣೆ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಚೆಕ್ಪೋಸ್ಟ್ ನಿರ್ಮಿಸಲಾಗಿದೆ. ಮೇ 25ರಂದು ಚೆಕ್ಪೋಸ್ಟ್ ಮೂಲಕ ಹೊರಟಿದ್ದ ಆರೋಪಿಯ ದ್ವಿಚಕ್ರ ವಾಹನ ತಡೆದು ತಪಾಸಣೆ ನಡೆಸಲಾಗಿತ್ತು.’</p>.<p>‘ವಾಹನಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಆರೋಪಿ ಹಾಜರುಪಡಿಸಿರಲಿಲ್ಲ. ಆತನನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡ’ ಎಂದೂ ತಿಳಿಸಿದರು.</p>.<p class="Subhead"><strong>ಸ್ನೇಹಿತನ ಜೊತೆ ಕೃತ್ಯ: </strong>’ಹಲವು ವರ್ಷಗಳಿಂದ ಆರೋಪಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾನೆ. ಸ್ನೇಹಿತನ ಜೊತೆ ಸೇರಿ ಮೊಬೈಲ್ ಕಲವು ಮಾಡುತ್ತಿದ್ದ ಬಗ್ಗೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಸ್ನೇಹಿತನ ಸಮೇತ ಬಂಧಿಸಿ 50ಕ್ಕೂ ಹೆಚ್ಚು ಮೊಬೈಲ್ ಜಪ್ತಿ ಮಾಡಲಾಗಿತ್ತು’ ಎಂದೂ ಪೊಲೀಸರು ಹೇಳಿದರು.</p>.<p>‘ಜೈಲಿನಿಂದ ಜಾಮೀನು ಮೇಲೆ ಹೊರಗೆ ಬಂದಿದ್ದ ಆರೋಪಿ, ವಾಹನ ಕಳ್ಳತನ ಮಾಡಲಾರಂಭಿಸಿದ್ದರು. ಮೇ 17ರಂದು ಆಂಧ್ರಹಳ್ಳಿಯ ಡಿ ಗ್ರೂಪ್ ಲೇಔಟ್ನಲ್ಲಿ ದ್ವಿಚಕ್ರ ವಾಹನ ಕದ್ದು ಪರಾರಿಯಾಗಿದ್ದ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>