<p><strong>ಬೆಂಗಳೂರು:</strong> ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪದಡಿ ದೀಪಕ್ ಅಲಿಯಾಸ್ ದೀಪುನನ್ನು (23) ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರೋಪಿ ದೀಪು, ಅಪರಾಧ ಹಿನ್ನೆಲೆಯುಳ್ಳವ. ಕೆಲ ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದಿದ್ದ. ಆಹಾರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಅದರ ಜೊತೆಗೆಯೇ ವಾಹನಗಳನ್ನು ಕದಿಯುತ್ತಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಆಹಾರ ಪೂರೈಕೆಗಾಗಿ ನಗರದ ಹಲವೆಡೆ ಸುತ್ತಾಡುತ್ತಿದ್ದ ಆರೋಪಿ, ದ್ವಿಚಕ್ರ ವಾಹನಗಳನ್ನು ಗುರುತಿಸುತ್ತಿದ್ದ. ಹ್ಯಾಂಡಲ್ ಲಾಕ್ ಮುರಿದು ವಾಹನ ಕದ್ದೊಯ್ಯುತ್ತಿದ್ದ. ನಂತರ, ತನ್ನದೇ ವಾಹನವೆಂದು ಹೇಳಿ ಬೇರೆಯವರಿಗೆ ಮಾರುತ್ತಿದ್ದ.’</p>.<p>‘ಜೆ.ಪಿ.ನಗರ, ಪರಪ್ಪನ ಅಗ್ರಹಾರ, ಹೆಣ್ಣೂರು ಹಾಗೂ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿದ್ದ. ಬೈಯಪ್ಪನಹಳ್ಳಿ ಬಳಿಯ ಜಿ.ಎಂ. ಪಾಳ್ಯದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಇತ್ತೀಚೆಗೆ ಕಳ್ಳತನ ಆಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದ. ಈತನಿಂದ ₹ 3 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸಾರ್ವಜನಿಕ ಸ್ಥಳ ಹಾಗೂ ಮನೆ ಮುಂದೆ ನಿಲ್ಲಿಸುತ್ತಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪದಡಿ ದೀಪಕ್ ಅಲಿಯಾಸ್ ದೀಪುನನ್ನು (23) ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>‘ಆರೋಪಿ ದೀಪು, ಅಪರಾಧ ಹಿನ್ನೆಲೆಯುಳ್ಳವ. ಕೆಲ ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಜಾಮೀನು ಮೇಲೆ ಹೊರಬಂದಿದ್ದ. ಆಹಾರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಅದರ ಜೊತೆಗೆಯೇ ವಾಹನಗಳನ್ನು ಕದಿಯುತ್ತಿದ್ದ’ ಎಂದು ಪೊಲೀಸರು ಹೇಳಿದರು.</p>.<p>‘ಆಹಾರ ಪೂರೈಕೆಗಾಗಿ ನಗರದ ಹಲವೆಡೆ ಸುತ್ತಾಡುತ್ತಿದ್ದ ಆರೋಪಿ, ದ್ವಿಚಕ್ರ ವಾಹನಗಳನ್ನು ಗುರುತಿಸುತ್ತಿದ್ದ. ಹ್ಯಾಂಡಲ್ ಲಾಕ್ ಮುರಿದು ವಾಹನ ಕದ್ದೊಯ್ಯುತ್ತಿದ್ದ. ನಂತರ, ತನ್ನದೇ ವಾಹನವೆಂದು ಹೇಳಿ ಬೇರೆಯವರಿಗೆ ಮಾರುತ್ತಿದ್ದ.’</p>.<p>‘ಜೆ.ಪಿ.ನಗರ, ಪರಪ್ಪನ ಅಗ್ರಹಾರ, ಹೆಣ್ಣೂರು ಹಾಗೂ ಕೋಣನಕುಂಟೆ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಕೃತ್ಯ ಎಸಗಿದ್ದ. ಬೈಯಪ್ಪನಹಳ್ಳಿ ಬಳಿಯ ಜಿ.ಎಂ. ಪಾಳ್ಯದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಇತ್ತೀಚೆಗೆ ಕಳ್ಳತನ ಆಗಿತ್ತು. ಈ ಬಗ್ಗೆ ದಾಖಲಾದ ಪ್ರಕರಣದ ತನಿಖೆ ಕೈಗೊಂಡಾಗ ಆರೋಪಿ ಸಿಕ್ಕಿಬಿದ್ದ. ಈತನಿಂದ ₹ 3 ಲಕ್ಷ ಮೌಲ್ಯದ 5 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>