<p><strong>ಬೊಮ್ಮನಹಳ್ಳಿ: ‘</strong>ಜೀವನದ ಪ್ರತಿ ಕ್ಷಣವನ್ನು ಆಸ್ವಾದಿಸುತ್ತಲೇ ಪ್ರೀತಿ, ಸ್ನೇಹ ಮತ್ತು ವಿದ್ಯೆಗೆ ನಾವು ತಲೆಬಾಗಬೇಕು. ಮಹಿಳೆಯರ ಬಗ್ಗೆ ಗೌರವದಿಂದಿರಬೇಕು. ಆಗ ಮಾತ್ರವೇ ನಾವು ಮನುಷ್ಯರಾಗಲು ಸಾಧ್ಯ’ ಎಂದು ನಟ ರವಿಚಂದ್ರನ್ ಹೇಳಿದರು.</p>.<p>ಶುಕ್ರವಾರ ಕೋರಮಂಗಲದ ವೇಮನ ತಾಂತ್ರಿಕ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂತರಕಾಲೇಜು ಸಾಂಸ್ಕೃತಿಕ ಹಬ್ಬ ‘ವೇಮನೋತ್ಸವ–25’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವಜನರು ಮೊಬೈಲ್ ದಾಸರಾಗದೆ ಬದುಕು ರೂಪಿಸಿಕೊಳ್ಳುವುದರತ್ತ ಗಮನ ನೀಡಬೇಕು. ದಿನದಲ್ಲಿ ಕನಿಷ್ಠ ಒಂದು ಗಂಟೆಯಾದರೂ ಮೊಬೈಲ್ ಫೋನ್ ಸ್ಥಗಿತಗೊಳಿಸಿ ನಿಮ್ಮೊಳಗೆ ನೀವು ಬೆರೆಯಬೇಕು. ಓದುವ ಸಮಯದಲ್ಲಿ ಓದದೇ ಭವಿಷ್ಯದಲ್ಲಿ ಪಶ್ಚಾತ್ತಾಪಪಡುವುದರಿಂದ ಪ್ರಯೋಜನವಿಲ್ಲʼ ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರೆಡ್ಡಿ ಜನಸಂಘದ ಅಧ್ಯಕ್ಷ ಅಧ್ಯಕ್ಷ ಎಸ್.ಜಯರಾಮರೆಡ್ಡಿ, ‘ಶಿಕ್ಷಣ ಎಂಬುದು ಕೇವಲ ಪುಸ್ತಕದ ಗೀಳಾಗಬಾರದು. ಪಠ್ಯೇತರ ಚಟುವಟಿಕೆಗಳನ್ನು ಒಳಗೊಂಡಲ್ಲಿ ಅದು ನಿಜವಾದ ಶಿಕ್ಷಣ. ಈ ಹಿನ್ನೆಲೆಯಲ್ಲಿ ರೆಡ್ಡಿ ಜನಸಂಘ ಶಿಕ್ಷಣ ಸಂಸ್ಥೆಯು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿದೆʼ ಎಂದರು.</p>.<p>ಉಪಾಧ್ಯಕ್ಷರಾದ ಡಿ.ಎನ್.ಲಕ್ಷ್ಮಣರೆಡ್ಡಿ, ಕೆ.ಎನ್.ಕೃಷ್ಣಾರೆಡ್ಡಿ, ವೆಂಕಟಶಿವಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಶೇಖರ್ ರೆಡ್ಡಿ, ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಸೋಮಶೇಖರ್ ರೆಡ್ಡಿ, ಪ್ರಾಂಶುಪಾಲ ಡಾ.ವಿಜಯಸಿಂಹರೆಡ್ಡಿ ಇದ್ದರು.</p>.<p>ವಿದ್ಯಾರ್ಥಿಗಳಿಗಾಗಿ ಹಾಡು, ನೃತ್ಯ, ಭಾಷಣ, ಏಕಪಾತ್ರ ಅಭಿನಯ, ಮೂಕಾಭಿನಯ, ಸಮೂಹಗಾನ ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ: ‘</strong>ಜೀವನದ ಪ್ರತಿ ಕ್ಷಣವನ್ನು ಆಸ್ವಾದಿಸುತ್ತಲೇ ಪ್ರೀತಿ, ಸ್ನೇಹ ಮತ್ತು ವಿದ್ಯೆಗೆ ನಾವು ತಲೆಬಾಗಬೇಕು. ಮಹಿಳೆಯರ ಬಗ್ಗೆ ಗೌರವದಿಂದಿರಬೇಕು. ಆಗ ಮಾತ್ರವೇ ನಾವು ಮನುಷ್ಯರಾಗಲು ಸಾಧ್ಯ’ ಎಂದು ನಟ ರವಿಚಂದ್ರನ್ ಹೇಳಿದರು.</p>.<p>ಶುಕ್ರವಾರ ಕೋರಮಂಗಲದ ವೇಮನ ತಾಂತ್ರಿಕ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂತರಕಾಲೇಜು ಸಾಂಸ್ಕೃತಿಕ ಹಬ್ಬ ‘ವೇಮನೋತ್ಸವ–25’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಯುವಜನರು ಮೊಬೈಲ್ ದಾಸರಾಗದೆ ಬದುಕು ರೂಪಿಸಿಕೊಳ್ಳುವುದರತ್ತ ಗಮನ ನೀಡಬೇಕು. ದಿನದಲ್ಲಿ ಕನಿಷ್ಠ ಒಂದು ಗಂಟೆಯಾದರೂ ಮೊಬೈಲ್ ಫೋನ್ ಸ್ಥಗಿತಗೊಳಿಸಿ ನಿಮ್ಮೊಳಗೆ ನೀವು ಬೆರೆಯಬೇಕು. ಓದುವ ಸಮಯದಲ್ಲಿ ಓದದೇ ಭವಿಷ್ಯದಲ್ಲಿ ಪಶ್ಚಾತ್ತಾಪಪಡುವುದರಿಂದ ಪ್ರಯೋಜನವಿಲ್ಲʼ ಎಂದು ಕಿವಿಮಾತು ಹೇಳಿದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರೆಡ್ಡಿ ಜನಸಂಘದ ಅಧ್ಯಕ್ಷ ಅಧ್ಯಕ್ಷ ಎಸ್.ಜಯರಾಮರೆಡ್ಡಿ, ‘ಶಿಕ್ಷಣ ಎಂಬುದು ಕೇವಲ ಪುಸ್ತಕದ ಗೀಳಾಗಬಾರದು. ಪಠ್ಯೇತರ ಚಟುವಟಿಕೆಗಳನ್ನು ಒಳಗೊಂಡಲ್ಲಿ ಅದು ನಿಜವಾದ ಶಿಕ್ಷಣ. ಈ ಹಿನ್ನೆಲೆಯಲ್ಲಿ ರೆಡ್ಡಿ ಜನಸಂಘ ಶಿಕ್ಷಣ ಸಂಸ್ಥೆಯು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿದೆʼ ಎಂದರು.</p>.<p>ಉಪಾಧ್ಯಕ್ಷರಾದ ಡಿ.ಎನ್.ಲಕ್ಷ್ಮಣರೆಡ್ಡಿ, ಕೆ.ಎನ್.ಕೃಷ್ಣಾರೆಡ್ಡಿ, ವೆಂಕಟಶಿವಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಶೇಖರ್ ರೆಡ್ಡಿ, ಕ್ರೀಡಾ ಮತ್ತು ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಸೋಮಶೇಖರ್ ರೆಡ್ಡಿ, ಪ್ರಾಂಶುಪಾಲ ಡಾ.ವಿಜಯಸಿಂಹರೆಡ್ಡಿ ಇದ್ದರು.</p>.<p>ವಿದ್ಯಾರ್ಥಿಗಳಿಗಾಗಿ ಹಾಡು, ನೃತ್ಯ, ಭಾಷಣ, ಏಕಪಾತ್ರ ಅಭಿನಯ, ಮೂಕಾಭಿನಯ, ಸಮೂಹಗಾನ ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>