ಬೆಂಗಳೂರು: ‘ಕೇಂದ್ರದಿಂದ ರಾಜ್ಯಕ್ಕೆ 1,279 ವೆಂಟಿಲೇಟರ್ಗಳು ತಿಂಗಳಾಂತ್ಯದಲ್ಲಿ ಲಭ್ಯವಾಗಲಿದ್ದು, ಈ ವೆಂಟಿಲೇಟರ್ಗಳನ್ನು ತಕ್ಷಣವೇ ಅಳವಡಿಸಬೇಕು’ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.
ಕೋವಿಡ್ ದೃಢಪಟ್ಟ ಕಾರಣಕ್ಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ, ರಾಜ್ಯದಲ್ಲಿ ವೆಂಟಿಲೇಟರ್ ಅಳವಡಿಸಿದ ಹಾಸಿಗೆಗಳ ಸಂಖ್ಯೆ ಹೆಚ್ಚಿಸುವ ಕುರಿತಂತೆ ದೂರವಾಣಿ ಮೂಲಕ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
‘ಕೇಂದ್ರದ ಪಿ.ಎಂ. ಕೇರ್ಸ್ ನಿಧಿಯಲ್ಲಿ ರಾಜ್ಯಕ್ಕೆ ಈಗಾಗಲೇ 681 ವೆಂಟಿಲೇಟರ್ಗಳು ದೊರಕಿವೆ. ಬೆಂಗಳೂರಿನಲ್ಲಿ 166 ಸೇರಿದಂತೆ ರಾಜ್ಯದಲ್ಲಿ ವೆಂಟಿಲೇಟರ್ ಹಾಸಿಗೆಗಳ ಸಂಖ್ಯೆಯನ್ನು ಒಟ್ಟು 335ಕ್ಕೆ ಹೆಚ್ಚಿಸಲಾಗಿದೆ. ವಾರಾಂತ್ಯದಲ್ಲಿ ಉಳಿದ 346 ವೆಂಟಿಲೇಟರ್ಗಳನ್ನು ಅಳವಡಿಸಲಾಗುವುದು. ಆಸ್ಪತ್ರೆಯ ಸಿಬ್ಬಂದಿ ಅವುಗಳನ್ನು ಬಳಸಬೇಕು’ ಎಂದರು.
ಅಗತ್ಯವಿರುವ ವೈದ್ಯಕೀಯ ಸಿಬ್ಬಂದಿಯನ್ನು ತಕ್ಷಣವೇ ನೇಮಿಸಲು ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ, ‘ವೆಂಟಿಲೇ ಟರ್ಗಳನ್ನು ಒದಗಿಸುವಂತೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಾಡಿರುವ ಮನವಿಯನ್ನು ಪರಿಗಣಿಸಬೇಕು. ಕೋವಿಡ್ ಸಂಬಂಧ ತಾತ್ಕಾಲಿಕವಾಗಿ ಒದಗಿಸಲು ಷರತ್ತು ಮತ್ತು ನಿಯಮಗಳ ಬಗ್ಗೆಯೂ ತೀರ್ಮಾನಿಸಬೇಕು’ ಎಂದೂ ಸಲಹೆ ನೀಡಿದರು.