<p>ಬೆಂಗಳೂರು: ಮೈಸೂರು ರಸ್ತೆಯ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮನವಮಿ ಅಂಗವಾಗಿ ಶುಕ್ರವಾರ ಶ್ರೀರಾಮ ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವವು ಸಂಭ್ರಮದಿಂದ ನೆರವೇರಿತು.</p>.<p>ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಕಣ್ತುಂಬಿಕೊಂಡರು. ಕಲಾ ತಂಡಗಳು ಜಾತ್ರೆಯ ಮೆರುಗು ಹೆಚ್ಚಿಸಿ<br />ದ್ದವು. ಬ್ಯಾಟರಾಯನಪುರದ ಸುತ್ತಮುತ್ತಲ ಬಡಾವಣೆಯ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಗುರುವಾರವೂ<br />ವಿವಿಧ ಧಾರ್ಮಿಕ ಕಾರ್ಯಗಳು ನಡೆದಿದ್ದವು. ಜಾತ್ರೆ ಅಂಗವಾಗಿ ಪಾನಕ, ಮಜ್ಜಿಗೆ ವಿತರಣೆ ಮಾಡಲಾಯಿತು.</p>.<p>ರಥೋತ್ಸವದ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ವಾಹನ ಸವಾರರು ನಗರದ ಒಳಕ್ಕೆ ಬರಲು ಪರದಾಡಿದರು.</p>.<p>ಶುಕ್ರವಾರ ಬೆಳಿಗ್ಗೆ 8ರಿಂದಲೇ ಮೈಸೂರು ರಸ್ತೆಯ ಮೂಲಕ ನಗರದ ಒಳ ಹಾಗೂ ಹೊರಹೋಗುವ ವಾಹನ<br />ಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿತ್ತು. ಈ ಮಾರ್ಗಗಳು ಕಿರಿದಾಗಿದ್ದರಿಂದ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೇ ಚಾಲಕರು ಪರದಾಡಿದರು. ಕೆಲವು ನಿಮಿಷಗಳ ಕಾಲ ವಾಹನಗಳು ನಿಂತಲ್ಲೇ ನಿಂತಿದ್ದವು. ಕೆಎಸ್<br />ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳೂ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದವು.</p>.<p>ದೀಪಾಂಜಲಿನಗರ, ಕೆಂಗೇರಿ, ನಾಯಂಡಹಳ್ಳಿ, ಬಾಪೂಜಿ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶದ ಜನರು ಮೆಜೆಸ್ಟಿಕ್ ಬಳಿಗೆ ಬರಲು ಪರ್ಯಾಯ ಮಾರ್ಗ ಬಳಸಿದರು. ಶಾರದಪೀಠದ ಶೃಂಗೇರಿ ಶಂಕರಮಠ ಶಾರದಾರಥೋತ್ಸವವು ಶುಕ್ರವಾರ ಸಂಭ್ರಮ<br />ದಿಂದ ನೆರವೇರಿತು. ಸುತ್ತಮುತ್ತಲ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮೈಸೂರು ರಸ್ತೆಯ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶ್ರೀರಾಮನವಮಿ ಅಂಗವಾಗಿ ಶುಕ್ರವಾರ ಶ್ರೀರಾಮ ವೇಣುಗೋಪಾಲಸ್ವಾಮಿ ಬ್ರಹ್ಮರಥೋತ್ಸವವು ಸಂಭ್ರಮದಿಂದ ನೆರವೇರಿತು.</p>.<p>ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಕಣ್ತುಂಬಿಕೊಂಡರು. ಕಲಾ ತಂಡಗಳು ಜಾತ್ರೆಯ ಮೆರುಗು ಹೆಚ್ಚಿಸಿ<br />ದ್ದವು. ಬ್ಯಾಟರಾಯನಪುರದ ಸುತ್ತಮುತ್ತಲ ಬಡಾವಣೆಯ ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಗುರುವಾರವೂ<br />ವಿವಿಧ ಧಾರ್ಮಿಕ ಕಾರ್ಯಗಳು ನಡೆದಿದ್ದವು. ಜಾತ್ರೆ ಅಂಗವಾಗಿ ಪಾನಕ, ಮಜ್ಜಿಗೆ ವಿತರಣೆ ಮಾಡಲಾಯಿತು.</p>.<p>ರಥೋತ್ಸವದ ಹಿನ್ನೆಲೆಯಲ್ಲಿ ಮೈಸೂರು ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿತ್ತು. ವಾಹನ ಸವಾರರು ನಗರದ ಒಳಕ್ಕೆ ಬರಲು ಪರದಾಡಿದರು.</p>.<p>ಶುಕ್ರವಾರ ಬೆಳಿಗ್ಗೆ 8ರಿಂದಲೇ ಮೈಸೂರು ರಸ್ತೆಯ ಮೂಲಕ ನಗರದ ಒಳ ಹಾಗೂ ಹೊರಹೋಗುವ ವಾಹನ<br />ಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿತ್ತು. ಈ ಮಾರ್ಗಗಳು ಕಿರಿದಾಗಿದ್ದರಿಂದ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೇ ಚಾಲಕರು ಪರದಾಡಿದರು. ಕೆಲವು ನಿಮಿಷಗಳ ಕಾಲ ವಾಹನಗಳು ನಿಂತಲ್ಲೇ ನಿಂತಿದ್ದವು. ಕೆಎಸ್<br />ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳೂ ಸಂಚಾರ ದಟ್ಟಣೆಯಲ್ಲಿ ಸಿಲುಕಿದ್ದವು.</p>.<p>ದೀಪಾಂಜಲಿನಗರ, ಕೆಂಗೇರಿ, ನಾಯಂಡಹಳ್ಳಿ, ಬಾಪೂಜಿ ನಗರ ಸೇರಿದಂತೆ ಸುತ್ತಮುತ್ತಲ ಪ್ರದೇಶದ ಜನರು ಮೆಜೆಸ್ಟಿಕ್ ಬಳಿಗೆ ಬರಲು ಪರ್ಯಾಯ ಮಾರ್ಗ ಬಳಸಿದರು. ಶಾರದಪೀಠದ ಶೃಂಗೇರಿ ಶಂಕರಮಠ ಶಾರದಾರಥೋತ್ಸವವು ಶುಕ್ರವಾರ ಸಂಭ್ರಮ<br />ದಿಂದ ನೆರವೇರಿತು. ಸುತ್ತಮುತ್ತಲ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>