<p><strong>ಬೆಂಗಳೂರು</strong>: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 3ರಂದು ಮತದಾನ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸರ್ಕಾರಿ ಕಲಾ ಕಾಲೇಜಿನಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸಹಿತ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲಾದ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ನಲ್ಲಿ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿದರು.</p>.<p>ಬಿಬಿಎಂಪಿ ವ್ಯಾಪ್ತಿಯ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿ 106 ಮತಗಟ್ಟೆಗಳಿದ್ದು, ಜೂನ್ 3ರಂದು ಬೆಳಿಗ್ಗೆ 7ಕ್ಕೆ ಅಣಕು ಮತದಾನ ನಡೆಯಲಿದೆ. ಬೆಳಿಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. </p>.<p>ಪರಿಶೀಲನೆಯ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಜಿಲ್ಲಾ ಹೆಚ್ಚುವರಿ ಚುನಾವಣಾಧಿಕಾರಿಗಳಾದ ಕೆ. ಹರೀಶ್ ಕುಮಾರ್, ಸ್ನೇಹಲ್, ವಿನೋತ್ ಪ್ರಿಯಾ, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಜೂನ್ 3ರಂದು ಮತದಾನ ನಡೆಯಲಿದ್ದು, ಈ ಸಂಬಂಧ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸರ್ಕಾರಿ ಕಲಾ ಕಾಲೇಜಿನಲ್ಲಿರುವ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸಹಿತ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲಾದ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ನಲ್ಲಿ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿ ಮತಗಟ್ಟೆಗಳಿಗೆ ತೆರಳಿದರು.</p>.<p>ಬಿಬಿಎಂಪಿ ವ್ಯಾಪ್ತಿಯ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿ 106 ಮತಗಟ್ಟೆಗಳಿದ್ದು, ಜೂನ್ 3ರಂದು ಬೆಳಿಗ್ಗೆ 7ಕ್ಕೆ ಅಣಕು ಮತದಾನ ನಡೆಯಲಿದೆ. ಬೆಳಿಗ್ಗೆ 8ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. </p>.<p>ಪರಿಶೀಲನೆಯ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಜಿಲ್ಲಾ ಹೆಚ್ಚುವರಿ ಚುನಾವಣಾಧಿಕಾರಿಗಳಾದ ಕೆ. ಹರೀಶ್ ಕುಮಾರ್, ಸ್ನೇಹಲ್, ವಿನೋತ್ ಪ್ರಿಯಾ, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>