<p><strong>ಬೆಂಗಳೂರು</strong>: ‘ವಿದ್ಯಾರ್ಥಿಗಳು ಜ್ಞಾನ ಹಾಗೂ ಕೌಶಲದ ಜತೆಗೆ ಸಾಮಾಜಿಕ ಹೊಣೆಗಾರಿಕೆ ಹಾಗೂ ಮಾನವೀಯ ಸಂವೇದನೆಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ರಮೇಶ್ ತಿಳಿಸಿದರು.</p>.<p>ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿಗಳ ಸಭೆ ಮತ್ತು ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರು ಮತ್ತು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದು, ಗ್ರಾಮೀಣ ಪ್ರದೇಶಗಳ ಜನರು ಗಂಭೀರ ಆರೋಗ್ಯ ಬಿಕ್ಕಟ್ಟಿನ ಸಮಸ್ಯೆ ಎದುರಿಸುತ್ತಿದ್ದಾರೆ. ರಕ್ತದಾನ ಮಾಡುವುದು, ರಸ್ತೆ ಅಪಘಾತ, ದುರಂತಗಳ ಸಂದರ್ಭದಲ್ಲಿ ನೆರವಾಗುವಂತಹ ಸೇವಾ ಮನೋಭಾವವನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಿದೆ’ ಎಂದು ತಿಳಿಸಿದರು.</p>.<p>ರೆಡ್ ಕ್ರಾಸ್ ಸಂಸ್ಥೆಯ ನಗರ ಜಿಲ್ಲಾ ಕಾರ್ಯದರ್ಶಿ ಡಾ.ರಾಜೇಶ್, ರಾಜ್ಯ ಸಂಯೋಜಕ ಆನಂದ್, ಹಿರಿಯ ಸಲಹೆಗಾರ ಸಿ.ಎನ್.ಎನ್.ರಾಜು ಶಿಬಿರಾರ್ಥಿಗಳಿಗೆ ಉಪನ್ಯಾಸ ಮತ್ತು ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿದ್ಯಾರ್ಥಿಗಳು ಜ್ಞಾನ ಹಾಗೂ ಕೌಶಲದ ಜತೆಗೆ ಸಾಮಾಜಿಕ ಹೊಣೆಗಾರಿಕೆ ಹಾಗೂ ಮಾನವೀಯ ಸಂವೇದನೆಗಳನ್ನು ಬೆಳೆಸಿಕೊಳ್ಳಬೇಕು’ ಎಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ರಮೇಶ್ ತಿಳಿಸಿದರು.</p>.<p>ಸೆಂಟ್ರಲ್ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಯುವ ರೆಡ್ ಕ್ರಾಸ್ ಕಾರ್ಯಕ್ರಮ ಅಧಿಕಾರಿಗಳ ಸಭೆ ಮತ್ತು ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರು ಮತ್ತು ಮಕ್ಕಳು ರಕ್ತಹೀನತೆಯಿಂದ ಬಳಲುತ್ತಿದ್ದು, ಗ್ರಾಮೀಣ ಪ್ರದೇಶಗಳ ಜನರು ಗಂಭೀರ ಆರೋಗ್ಯ ಬಿಕ್ಕಟ್ಟಿನ ಸಮಸ್ಯೆ ಎದುರಿಸುತ್ತಿದ್ದಾರೆ. ರಕ್ತದಾನ ಮಾಡುವುದು, ರಸ್ತೆ ಅಪಘಾತ, ದುರಂತಗಳ ಸಂದರ್ಭದಲ್ಲಿ ನೆರವಾಗುವಂತಹ ಸೇವಾ ಮನೋಭಾವವನ್ನು ಉತ್ತೇಜಿಸಲು ವಿಶ್ವವಿದ್ಯಾಲಯ ವಿಶೇಷ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಿದೆ’ ಎಂದು ತಿಳಿಸಿದರು.</p>.<p>ರೆಡ್ ಕ್ರಾಸ್ ಸಂಸ್ಥೆಯ ನಗರ ಜಿಲ್ಲಾ ಕಾರ್ಯದರ್ಶಿ ಡಾ.ರಾಜೇಶ್, ರಾಜ್ಯ ಸಂಯೋಜಕ ಆನಂದ್, ಹಿರಿಯ ಸಲಹೆಗಾರ ಸಿ.ಎನ್.ಎನ್.ರಾಜು ಶಿಬಿರಾರ್ಥಿಗಳಿಗೆ ಉಪನ್ಯಾಸ ಮತ್ತು ಮಾರ್ಗದರ್ಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>