<p><strong>ಬೆಂಗಳೂರು:</strong> ‘ಭಾರತದ ನವೋದ್ಯಮಗಳು ಜಾಗತಿಕ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿವೆ’ ಎಂದು ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು.</p>.<p>ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ 25 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಿದ್ದ ‘ರಜತ ಮಹೋತ್ಸವ’ದಲ್ಲಿ ಇನ್ಕ್ಯುಬೇಷನ್ ಸೆಂಟರ್ ಮತ್ತು ಸಿಲ್ವರ್ ಜುಬಿಲಿ ಆಡಿಟೋರಿಯಂಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕಾಲೇಜುಗಳು ಕೇವಲ ಕಲಿಕಾ ಕೇಂದ್ರಗಳಲ್ಲ, ಅವು ನಾವೀನ್ಯಗಳ ಪ್ರಯೋಗಾಲಯಗಳಾಗಬೇಕು. ವಿದ್ಯಾರ್ಥಿಗಳಲ್ಲಿ ರೂಪುಗೊಳ್ಳುವ ಜವಾಬ್ದಾರಿಯುತ ನಾಯಕತ್ವ ಅವರ ಯಶಸ್ಸಿನ ಗುಟ್ಟು’ ಎಂದು ಹೇಳಿದರು.</p>.<p>‘ಹವಾಮಾನ ಬದಲಾವಣೆ ಮತ್ತು ಎಐ ನೈತಿಕ ಬಳಕೆಯಂತಹ ಸವಾಲುಗಳನ್ನು ಎದುರಿಸುವಲ್ಲಿ ಭಾರತೀಯ ನವೋದ್ಯಮಗಳು ಜಾಗತಿಕ ನಾಯಕರಾಗಿ ಹೊರಹೊಮ್ಮಲಿವೆ. 2047ರ ವೇಳೆಗೆ ದೇಶ ‘ವಿಕಸಿತ ಭಾರತ’ವಾಗುವ ಗುರಿ ಹೊಂದಿದೆ. ಯುವಶಕ್ತಿಯು ಈ ಕನಸನ್ನು ನನಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಮಾತನಾಡಿ, ‘ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾದದ್ದು. ಇಂದಿನ ಜಗತ್ತನ್ನು ಕೃತಕ ಬುದ್ಧಿಮತ್ತೆ, ಡೇಟಾ ಸೈನ್ಸ್ ಮತ್ತು ರೊಬೊಟಿಕ್ಸ್ ಪರಿವರ್ತಿಸುತ್ತಿವೆ’ ಎಂದರು.</p>.<p>ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಸಿಎಂಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಕೆ.ಸಿ.ರಾಮಮೂರ್ತಿ, ಎನ್ಪಿಎಸ್ ಸಮೂಹ ಸಂಸ್ಥೆಗಳು, ಎನ್ಎಎಫ್ಎಲ್ ಮತ್ತು ಟಿಐಎಸ್ಬಿ ಅಧ್ಯಕ್ಷ ಕೆ.ಪಿ.ಗೋಪಾಲಕೃಷ್ಣ ಅವರು ಪಾಲ್ಗೊಂಡಿದ್ದರು.</p>.<p>ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂಆರ್ ಐಟಿಯಲ್ಲಿ ವ್ಯಾಸಂಗ ಮಾಡಿ ದೇಶ-ವಿದೇಶಗಳಲ್ಲಿ ನವೋದ್ಯಮಿಗಳಾಗಿ ಸಾಧನೆ ಮಾಡಿರುವ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಸಿಎಂಆರ್ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಬಿತಾ ರಾಮಮೂರ್ತಿ ಅವರು ‘ಮಾದಕ ದ್ರವ್ಯ ವ್ಯಸನಗಳನ್ನು ತ್ಯಜಿಸುವ ಜಾಗೃತಿ ಅಭಿಯಾನ’ದ ಪ್ರಮಾಣ ವಚನ ಬೋಧಿಸಿದರು.</p>.<p>ಸಿಎಂಆರ್ ಜ್ಞಾನಧಾರ ಟ್ರಸ್ಟ್ ಕಾರ್ಯದರ್ಶಿ ಕೆ.ಸಿ.ಜಗನ್ನಾಥ್ ರೆಡ್ಡಿ, ಸಿಇಒ ಹಾಗೂ ಸಮಕುಲಪತಿ ಜಯದೀಪ್ ಕೆ.ಆರ್.ರೆಡ್ಡಿ, ಏಕ್ಯಾ ಸಮೂಹ ಶಾಲೆಗಳ ಸಂಸ್ಥಾಪಕಿ ತ್ರಿಸ್ತಾ ರಾಮಮೂರ್ತಿ, ಪ್ರಾಂಶುಪಾಲ ಸಂಜಯ್ ಜೈನ್ ಹಾಗೂ ಉಪ ಪ್ರಾಂಶುಪಾಲ ಬಿ. ನರಸಿಂಹ ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಭಾರತದ ನವೋದ್ಯಮಗಳು ಜಾಗತಿಕ ಸವಾಲುಗಳನ್ನು ಎದುರಿಸುವ ಶಕ್ತಿಯನ್ನು ಹೊಂದಿವೆ’ ಎಂದು ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಹೇಳಿದರು.</p>.<p>ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯ 25 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಿದ್ದ ‘ರಜತ ಮಹೋತ್ಸವ’ದಲ್ಲಿ ಇನ್ಕ್ಯುಬೇಷನ್ ಸೆಂಟರ್ ಮತ್ತು ಸಿಲ್ವರ್ ಜುಬಿಲಿ ಆಡಿಟೋರಿಯಂಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಕಾಲೇಜುಗಳು ಕೇವಲ ಕಲಿಕಾ ಕೇಂದ್ರಗಳಲ್ಲ, ಅವು ನಾವೀನ್ಯಗಳ ಪ್ರಯೋಗಾಲಯಗಳಾಗಬೇಕು. ವಿದ್ಯಾರ್ಥಿಗಳಲ್ಲಿ ರೂಪುಗೊಳ್ಳುವ ಜವಾಬ್ದಾರಿಯುತ ನಾಯಕತ್ವ ಅವರ ಯಶಸ್ಸಿನ ಗುಟ್ಟು’ ಎಂದು ಹೇಳಿದರು.</p>.<p>‘ಹವಾಮಾನ ಬದಲಾವಣೆ ಮತ್ತು ಎಐ ನೈತಿಕ ಬಳಕೆಯಂತಹ ಸವಾಲುಗಳನ್ನು ಎದುರಿಸುವಲ್ಲಿ ಭಾರತೀಯ ನವೋದ್ಯಮಗಳು ಜಾಗತಿಕ ನಾಯಕರಾಗಿ ಹೊರಹೊಮ್ಮಲಿವೆ. 2047ರ ವೇಳೆಗೆ ದೇಶ ‘ವಿಕಸಿತ ಭಾರತ’ವಾಗುವ ಗುರಿ ಹೊಂದಿದೆ. ಯುವಶಕ್ತಿಯು ಈ ಕನಸನ್ನು ನನಸಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ’ ಎಂದು ಆಶಯ ವ್ಯಕ್ತಪಡಿಸಿದರು.</p>.<p>ರಾಜ್ಯಪಾಲ ಥಾವರಚಂದ್ ಗೆಹಲೋತ್ ಮಾತನಾಡಿ, ‘ಶಿಕ್ಷಣ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳ ಪಾತ್ರ ಪ್ರಮುಖವಾದದ್ದು. ಇಂದಿನ ಜಗತ್ತನ್ನು ಕೃತಕ ಬುದ್ಧಿಮತ್ತೆ, ಡೇಟಾ ಸೈನ್ಸ್ ಮತ್ತು ರೊಬೊಟಿಕ್ಸ್ ಪರಿವರ್ತಿಸುತ್ತಿವೆ’ ಎಂದರು.</p>.<p>ಸಿಎಂಆರ್ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಸಿಎಂಆರ್ ವಿಶ್ವವಿದ್ಯಾಲಯದ ಅಧ್ಯಕ್ಷ ಕೆ.ಸಿ.ರಾಮಮೂರ್ತಿ, ಎನ್ಪಿಎಸ್ ಸಮೂಹ ಸಂಸ್ಥೆಗಳು, ಎನ್ಎಎಫ್ಎಲ್ ಮತ್ತು ಟಿಐಎಸ್ಬಿ ಅಧ್ಯಕ್ಷ ಕೆ.ಪಿ.ಗೋಪಾಲಕೃಷ್ಣ ಅವರು ಪಾಲ್ಗೊಂಡಿದ್ದರು.</p>.<p>ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂಆರ್ ಐಟಿಯಲ್ಲಿ ವ್ಯಾಸಂಗ ಮಾಡಿ ದೇಶ-ವಿದೇಶಗಳಲ್ಲಿ ನವೋದ್ಯಮಿಗಳಾಗಿ ಸಾಧನೆ ಮಾಡಿರುವ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.</p>.<p>ಸಿಎಂಆರ್ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಬಿತಾ ರಾಮಮೂರ್ತಿ ಅವರು ‘ಮಾದಕ ದ್ರವ್ಯ ವ್ಯಸನಗಳನ್ನು ತ್ಯಜಿಸುವ ಜಾಗೃತಿ ಅಭಿಯಾನ’ದ ಪ್ರಮಾಣ ವಚನ ಬೋಧಿಸಿದರು.</p>.<p>ಸಿಎಂಆರ್ ಜ್ಞಾನಧಾರ ಟ್ರಸ್ಟ್ ಕಾರ್ಯದರ್ಶಿ ಕೆ.ಸಿ.ಜಗನ್ನಾಥ್ ರೆಡ್ಡಿ, ಸಿಇಒ ಹಾಗೂ ಸಮಕುಲಪತಿ ಜಯದೀಪ್ ಕೆ.ಆರ್.ರೆಡ್ಡಿ, ಏಕ್ಯಾ ಸಮೂಹ ಶಾಲೆಗಳ ಸಂಸ್ಥಾಪಕಿ ತ್ರಿಸ್ತಾ ರಾಮಮೂರ್ತಿ, ಪ್ರಾಂಶುಪಾಲ ಸಂಜಯ್ ಜೈನ್ ಹಾಗೂ ಉಪ ಪ್ರಾಂಶುಪಾಲ ಬಿ. ನರಸಿಂಹ ಮೂರ್ತಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>