<p><strong>ಬೆಂಗಳೂರು:</strong> ‘ಅಕ್ಟೋಬರ್ ವೇತನ ಪಾವತಿ ಮಾಡಿಲ್ಲ’ ಎಂದು ಆರೋಪಿಸಿ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು)’ ನೇತೃತ್ವದಲ್ಲಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆಸ್ಪತ್ರೆಯ ಸ್ವಚ್ಛತೆ ಕಾರ್ಮಿಕರು, ಕೊಠಡಿ ಸಹಾಯಕರು, ಲಿಫ್ಟ್ ನಿರ್ವಹಣೆಗಾರು, ಡಾಟಾ ಎಂಟ್ರಿ ಆಪರೇಟರ್ಸ್ಗಳು ಹಾಗೂ ಭದ್ರತಾ ಸಿಬ್ಬಂದಿ ಪ್ರತಿಭಟನೆಯಲ್ಲಿದ್ದರು.</p>.<p>‘ಚಾಲ್ತಿಯಲ್ಲಿರುವ ಕಾನೂನಿನ್ವಯ ಪ್ರತಿ ತಿಂಗಳು 7ರೊಳಗೆ ಕಾರ್ಮಿಕರಿಗೆ ವೇತನ ಪಾವತಿ ಮಾಡಬೇಕು. ಆದರೆ, ಅಕ್ಟೋಬರ್ ಮುಗಿದು ನವೆಂಬರ್ ಆರಂಭವಾದರೂ ವೇತನ ನೀಡಿಲ್ಲ. ಈ ಬಗ್ಗೆ ವಿಚಾರಿಸಿದಾಗ, ಆಡಳಿತ ಮಂಡಳಿಯವರಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘ವೇತನವನ್ನೇ ನಂಬಿಕೊಂಡು ಸಿಬ್ಬಂದಿ ಜೀವನ ಸಾಗಿಸುತ್ತಿದ್ದಾರೆ. ವೇತನ ಬಾರದಿದ್ದರಿಂದ ಸಿಬ್ಬಂದಿ, ಮನೆ ಬಾಡಿಗೆ ಪಾವತಿ ಮಾಡಲಾಗದೇ ಕಷ್ಟ ಅನುಭವಿಸುತ್ತಿದ್ದಾರೆ. ಕೆಲವರು, ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಾಕಿ ವೇತನವನ್ನು ಕೂಡಲೇ ಪಾವತಿಸಬೇಕು. ಇಲ್ಲದಿದ್ದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಅಕ್ಟೋಬರ್ ವೇತನ ಪಾವತಿ ಮಾಡಿಲ್ಲ’ ಎಂದು ಆರೋಪಿಸಿ ವಿಕ್ಟೋರಿಯಾ ಆಸ್ಪತ್ರೆಯ ಸಿಬ್ಬಂದಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು)’ ನೇತೃತ್ವದಲ್ಲಿ ಆಸ್ಪತ್ರೆಯ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆಸ್ಪತ್ರೆಯ ಸ್ವಚ್ಛತೆ ಕಾರ್ಮಿಕರು, ಕೊಠಡಿ ಸಹಾಯಕರು, ಲಿಫ್ಟ್ ನಿರ್ವಹಣೆಗಾರು, ಡಾಟಾ ಎಂಟ್ರಿ ಆಪರೇಟರ್ಸ್ಗಳು ಹಾಗೂ ಭದ್ರತಾ ಸಿಬ್ಬಂದಿ ಪ್ರತಿಭಟನೆಯಲ್ಲಿದ್ದರು.</p>.<p>‘ಚಾಲ್ತಿಯಲ್ಲಿರುವ ಕಾನೂನಿನ್ವಯ ಪ್ರತಿ ತಿಂಗಳು 7ರೊಳಗೆ ಕಾರ್ಮಿಕರಿಗೆ ವೇತನ ಪಾವತಿ ಮಾಡಬೇಕು. ಆದರೆ, ಅಕ್ಟೋಬರ್ ಮುಗಿದು ನವೆಂಬರ್ ಆರಂಭವಾದರೂ ವೇತನ ನೀಡಿಲ್ಲ. ಈ ಬಗ್ಗೆ ವಿಚಾರಿಸಿದಾಗ, ಆಡಳಿತ ಮಂಡಳಿಯವರಿಂದ ಯಾವುದೇ ಸ್ಪಂದನೆ ಸಿಗುತ್ತಿಲ್ಲ’ ಎಂದು ಪ್ರತಿಭಟನಕಾರರು ದೂರಿದರು.</p>.<p>‘ವೇತನವನ್ನೇ ನಂಬಿಕೊಂಡು ಸಿಬ್ಬಂದಿ ಜೀವನ ಸಾಗಿಸುತ್ತಿದ್ದಾರೆ. ವೇತನ ಬಾರದಿದ್ದರಿಂದ ಸಿಬ್ಬಂದಿ, ಮನೆ ಬಾಡಿಗೆ ಪಾವತಿ ಮಾಡಲಾಗದೇ ಕಷ್ಟ ಅನುಭವಿಸುತ್ತಿದ್ದಾರೆ. ಕೆಲವರು, ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಾಕಿ ವೇತನವನ್ನು ಕೂಡಲೇ ಪಾವತಿಸಬೇಕು. ಇಲ್ಲದಿದ್ದರೆ, ಗಂಭೀರ ಸ್ವರೂಪದ ಹೋರಾಟ ನಡೆಸಲಾಗುವುದು’ ಎಂದೂ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>