‘ಪಾರಂಪರಿಕ ಕಟ್ಟಡಗಳಿಗೆ ಹಾನಿ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನುಗಳನ್ನು ಬಲಗೊಳಿಸಿ, ಪರಿಣಾಮಕಾರಿ
ಯಾಗಿ ಅನುಷ್ಠಾನ ಮಾಡಲು ಸರ್ಕಾರವನ್ನು ಒತ್ತಾಯಿಸುತ್ತಿದ್ದೇವೆ. ಇನ್ನೊಂದೆಡೆ, ನಗರದಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ಒಂದೊಂದಾಗಿ ನೆಲಸಮ ಮಾಡಲಾಗುತ್ತಿದೆ. ಈಗ ಸರ್ಕಾರಿ ಕಟ್ಟಡವನ್ನೇ ನೆಲಸಮ ಮಾಡಲಾಗುತ್ತಿದೆ’ ಎಂದು ವಾಸ್ತುಶಿಲ್ಪಿ ನರೇಶ್ ನರಸಿಂಹನ್ ತಿಳಿಸಿದರು.