<p><strong>ಬೆಂಗಳೂರು</strong>: ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ರೋಗಿಯೊಬ್ಬರ ನರಳಾಟದ ಬಗ್ಗೆ ವರದಿ ಮಾಡಲು ಹೋಗಿದ್ದ ಮಾಧ್ಯಮದವರು ಹಾಗೂ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ನಡುವೆ ಭಾನುವಾರ ಬೆಳಿಗ್ಗೆ ಜಟಾಪಟಿ ನಡೆಯಿತು.</p>.<p>ಅನಾರೋಗ್ಯಕ್ಕೆ ತುತ್ತಾಗಿದ್ದ ಬನಶಂಕರಿ ನಿವಾಸಿ 53 ವರ್ಷದ ಪ್ರಕಾಶ್ ಅವರನ್ನು ಆಟೊದಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿರಲಿಲ್ಲ. ಉಸಿರಾಟದ ಸಮಸ್ಯೆಯಿಂದಾಗಿ ಪ್ರಕಾಶ್, ಆಟೊದಲ್ಲಿ ನರಳಾಡುತ್ತಿದ್ದರು.</p>.<p>ಆ ಬಗ್ಗೆ ವರದಿ ಮಾಡಲು ಮಾಧ್ಯಮ ಪ್ರತಿನಿಧಿಗಳು, ಆಸ್ಪತ್ರೆ ಆವರಣಕ್ಕೆ ಹೋಗಿದ್ದರು. ಅವರನ್ನು ತಡೆದ ಭದ್ರತಾ ಸಿಬ್ಬಂದಿ, ‘ಮಾಧ್ಯಮವರನ್ನು ಒಳಗೆ ಬಿಡದಂತೆ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಒಳಗೆ ಬಿಡುವುದಿಲ್ಲ’ ಎಂದು ಹೇಳಿ ತಳ್ಳಾಡಿದರು. ಕ್ಯಾಮೆರಾ ಕಸಿದುಕೊಳ್ಳಲು ಯತ್ನಿಸಿದರು. ಇದೇ ವೇಳೆ ಜಟಾಪಟಿ ನಡೆಯಿತು.</p>.<p>ಪ್ರಕಾಶ್ ಅವರ ಪತ್ನಿ ಭಾಗ್ಯ, ‘ಬೆಡ್ ಇಲ್ಲವೆಂದು ಆಸ್ಪತ್ರೆಯವರು ಹೇಳುತ್ತಿದ್ದಾರೆ. ಆಟೊದಲ್ಲೇ ಪತಿ ನರಳುತ್ತಿದ್ದು, ದಯವಿಟ್ಟು ಆಸ್ಪತ್ರೆಗೆ ಸೇರಿಸಿ’ ಎಂದು ಗೋಳಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ರೋಗಿಯೊಬ್ಬರ ನರಳಾಟದ ಬಗ್ಗೆ ವರದಿ ಮಾಡಲು ಹೋಗಿದ್ದ ಮಾಧ್ಯಮದವರು ಹಾಗೂ ಆಸ್ಪತ್ರೆಯ ಭದ್ರತಾ ಸಿಬ್ಬಂದಿ ನಡುವೆ ಭಾನುವಾರ ಬೆಳಿಗ್ಗೆ ಜಟಾಪಟಿ ನಡೆಯಿತು.</p>.<p>ಅನಾರೋಗ್ಯಕ್ಕೆ ತುತ್ತಾಗಿದ್ದ ಬನಶಂಕರಿ ನಿವಾಸಿ 53 ವರ್ಷದ ಪ್ರಕಾಶ್ ಅವರನ್ನು ಆಟೊದಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿರಲಿಲ್ಲ. ಉಸಿರಾಟದ ಸಮಸ್ಯೆಯಿಂದಾಗಿ ಪ್ರಕಾಶ್, ಆಟೊದಲ್ಲಿ ನರಳಾಡುತ್ತಿದ್ದರು.</p>.<p>ಆ ಬಗ್ಗೆ ವರದಿ ಮಾಡಲು ಮಾಧ್ಯಮ ಪ್ರತಿನಿಧಿಗಳು, ಆಸ್ಪತ್ರೆ ಆವರಣಕ್ಕೆ ಹೋಗಿದ್ದರು. ಅವರನ್ನು ತಡೆದ ಭದ್ರತಾ ಸಿಬ್ಬಂದಿ, ‘ಮಾಧ್ಯಮವರನ್ನು ಒಳಗೆ ಬಿಡದಂತೆ ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಒಳಗೆ ಬಿಡುವುದಿಲ್ಲ’ ಎಂದು ಹೇಳಿ ತಳ್ಳಾಡಿದರು. ಕ್ಯಾಮೆರಾ ಕಸಿದುಕೊಳ್ಳಲು ಯತ್ನಿಸಿದರು. ಇದೇ ವೇಳೆ ಜಟಾಪಟಿ ನಡೆಯಿತು.</p>.<p>ಪ್ರಕಾಶ್ ಅವರ ಪತ್ನಿ ಭಾಗ್ಯ, ‘ಬೆಡ್ ಇಲ್ಲವೆಂದು ಆಸ್ಪತ್ರೆಯವರು ಹೇಳುತ್ತಿದ್ದಾರೆ. ಆಟೊದಲ್ಲೇ ಪತಿ ನರಳುತ್ತಿದ್ದು, ದಯವಿಟ್ಟು ಆಸ್ಪತ್ರೆಗೆ ಸೇರಿಸಿ’ ಎಂದು ಗೋಳಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>