<p><strong>ಬೆಂಗಳೂರು</strong>: ರೋಗಿಗಳ ಅನುಕೂಲಕ್ಕಾಗಿ ಅಳವಡಿಸಿದ್ದ ಯುಪಿಐ ಸ್ಕ್ಯಾನರ್ ತೆಗೆದು ವೈಯಕ್ತಿಕ ಯುಪಿಐ ಸ್ಕ್ಯಾನರ್ ಅಳವಡಿಸಿಕೊಂಡು ₹23 ಲಕ್ಷ ವಂಚಿಸಿದ್ದ ವಿಕ್ಟೋರಿಯಾ ಆಸ್ಪತ್ರೆಯ ಎಂಟು ಸಿಬ್ಬಂದಿಯ ವಿರುದ್ಧ ವಿಶ್ವೇಶ್ವರಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಕೆಲಸ ಮಾಡುತ್ತಿದ್ದ ಪ್ರೀತಿ, ಎಸ್.ಪುನೀತಾ, ಸಲ್ಮಾ, ಸತ್ಯಾ, ಶಶಿಕಲಾ, ಲಕ್ಷ್ಮಿಕಾಂತಮ್ಮ, ದರ್ಶನ್ ಹಾಗೂ ಮಹೇಂದ್ರ ಅವರ ವಿರುದ್ಧ ವಂಚನೆ ಆರೋಪದ ಅಡಿ ಪ್ರಕರಣ ದಾಖಲಾಗಿದೆ.</p>.<p>ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಎಸ್.ದೀಪಕ್ ಅವರು ಜಯಲಕ್ಷ್ಮಿ ಅವರ ಮೂಲಕ ದೂರು ನೀಡಿದ್ದರು. ಆ ದೂರು ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಆಸ್ಪತ್ರೆಯ ಇನ್ಫೊಸಿಸ್ ಲ್ಯಾಬ್ ಬಿಲ್ಲಿಂಗ್ ಕೌಂಟರ್ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಎಂಟು ಮಂದಿಯನ್ನು ನೇಮಕ ಮಾಡಿಕೊಳ್ಳಲಾಗಿತ್ತು. ರಕ್ತ ಪರೀಕ್ಷೆಗೆ ಬರುವ ರೋಗಿಗಳು ಕೌಂಟರ್ನಲ್ಲಿ ನೀಡುತ್ತಿದ್ದ ಹಣವನ್ನು ಸರ್ಕಾರದ ಖಾತೆಗೆ ಜಮೆ ಮಾಡದೇ ಸ್ವಂತಕ್ಕೆ ಬಳಸಿಕೊಂಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.</p>.<p><strong>ಹೇಗೆ ವಂಚನೆ?</strong></p><p>ಆಸ್ಪತ್ರೆಯಲ್ಲಿ ರೋಗಿಗಳ ಅನುಕೂಲಕ್ಕಾಗಿ ಯುಪಿಐ ಸ್ಕ್ಯಾನರ್ ಅಳವಡಿಸಲಾಗಿತ್ತು. ಆದರೆ, ಆಸ್ಪತ್ರೆ ಸಿಬ್ಬಂದಿ ವೈಯಕ್ತಿಕ ಕ್ಯೂಆರ್ ಕೋಡ್ ಸ್ಕ್ಯಾನರ್ ಅಳವಡಿಸಿ ತಮ್ಮ ಖಾತೆಗೆ ರೋಗಿಗಳ ಹಣವನ್ನು ಹಾಕಿಸಿಕೊಂಡಿದ್ದರು. ಪ್ರಯೋಗಾಲಯ, ಹೊರ ರೋಗಿಗಳ ವಿಭಾಗ, ಎಕ್ಸ್ರೇ ವಿಭಾಗದಲ್ಲಿ ಈ ರೀತಿಯ ಕೃತ್ಯ ಎಸಗಿ ₹23 ಲಕ್ಷ ಹಣ ದೋಚಿದ್ದಾರೆ. ಬಳಿಕ, ಯುಪಿಐ ಸ್ಕ್ಯಾನರ್ ವಿಚಾರದಲ್ಲಿ ಅನುಮಾನ ಬಂದಿದ್ದರಿಂದ ದೀಪಕ್ ಅವರು ಸಮಿತಿ ರಚಿಸಿ ತನಿಖೆ ನಡೆಸಿದಾಗ ಸಿಬ್ಬಂದಿಯ ಕೃತ್ಯ ಬಯಲಾಗಿತ್ತು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೋಗಿಗಳ ಅನುಕೂಲಕ್ಕಾಗಿ ಅಳವಡಿಸಿದ್ದ ಯುಪಿಐ ಸ್ಕ್ಯಾನರ್ ತೆಗೆದು ವೈಯಕ್ತಿಕ ಯುಪಿಐ ಸ್ಕ್ಯಾನರ್ ಅಳವಡಿಸಿಕೊಂಡು ₹23 ಲಕ್ಷ ವಂಚಿಸಿದ್ದ ವಿಕ್ಟೋರಿಯಾ ಆಸ್ಪತ್ರೆಯ ಎಂಟು ಸಿಬ್ಬಂದಿಯ ವಿರುದ್ಧ ವಿಶ್ವೇಶ್ವರಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಆಸ್ಪತ್ರೆಯ ಪ್ರಯೋಗಾಲಯದಲ್ಲಿ ಕೆಲಸ ಮಾಡುತ್ತಿದ್ದ ಪ್ರೀತಿ, ಎಸ್.ಪುನೀತಾ, ಸಲ್ಮಾ, ಸತ್ಯಾ, ಶಶಿಕಲಾ, ಲಕ್ಷ್ಮಿಕಾಂತಮ್ಮ, ದರ್ಶನ್ ಹಾಗೂ ಮಹೇಂದ್ರ ಅವರ ವಿರುದ್ಧ ವಂಚನೆ ಆರೋಪದ ಅಡಿ ಪ್ರಕರಣ ದಾಖಲಾಗಿದೆ.</p>.<p>ವಿಕ್ಟೋರಿಯಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಎಸ್.ದೀಪಕ್ ಅವರು ಜಯಲಕ್ಷ್ಮಿ ಅವರ ಮೂಲಕ ದೂರು ನೀಡಿದ್ದರು. ಆ ದೂರು ಆಧರಿಸಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.</p>.<p>ಆಸ್ಪತ್ರೆಯ ಇನ್ಫೊಸಿಸ್ ಲ್ಯಾಬ್ ಬಿಲ್ಲಿಂಗ್ ಕೌಂಟರ್ನಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಎಂಟು ಮಂದಿಯನ್ನು ನೇಮಕ ಮಾಡಿಕೊಳ್ಳಲಾಗಿತ್ತು. ರಕ್ತ ಪರೀಕ್ಷೆಗೆ ಬರುವ ರೋಗಿಗಳು ಕೌಂಟರ್ನಲ್ಲಿ ನೀಡುತ್ತಿದ್ದ ಹಣವನ್ನು ಸರ್ಕಾರದ ಖಾತೆಗೆ ಜಮೆ ಮಾಡದೇ ಸ್ವಂತಕ್ಕೆ ಬಳಸಿಕೊಂಡಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.</p>.<p><strong>ಹೇಗೆ ವಂಚನೆ?</strong></p><p>ಆಸ್ಪತ್ರೆಯಲ್ಲಿ ರೋಗಿಗಳ ಅನುಕೂಲಕ್ಕಾಗಿ ಯುಪಿಐ ಸ್ಕ್ಯಾನರ್ ಅಳವಡಿಸಲಾಗಿತ್ತು. ಆದರೆ, ಆಸ್ಪತ್ರೆ ಸಿಬ್ಬಂದಿ ವೈಯಕ್ತಿಕ ಕ್ಯೂಆರ್ ಕೋಡ್ ಸ್ಕ್ಯಾನರ್ ಅಳವಡಿಸಿ ತಮ್ಮ ಖಾತೆಗೆ ರೋಗಿಗಳ ಹಣವನ್ನು ಹಾಕಿಸಿಕೊಂಡಿದ್ದರು. ಪ್ರಯೋಗಾಲಯ, ಹೊರ ರೋಗಿಗಳ ವಿಭಾಗ, ಎಕ್ಸ್ರೇ ವಿಭಾಗದಲ್ಲಿ ಈ ರೀತಿಯ ಕೃತ್ಯ ಎಸಗಿ ₹23 ಲಕ್ಷ ಹಣ ದೋಚಿದ್ದಾರೆ. ಬಳಿಕ, ಯುಪಿಐ ಸ್ಕ್ಯಾನರ್ ವಿಚಾರದಲ್ಲಿ ಅನುಮಾನ ಬಂದಿದ್ದರಿಂದ ದೀಪಕ್ ಅವರು ಸಮಿತಿ ರಚಿಸಿ ತನಿಖೆ ನಡೆಸಿದಾಗ ಸಿಬ್ಬಂದಿಯ ಕೃತ್ಯ ಬಯಲಾಗಿತ್ತು ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>