‘ಕೋಲಾರ, ತುಮಕೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಸಮಾಜ ನಮ್ಮದು. ರಾಜಕೀಯ ಪ್ರಾತಿನಿಧ್ಯವೇ ಇಲ್ಲದಿದ್ದ ಈ ಸಮಾಜವನ್ನು ಮೊದಲು ಕಾಂಗ್ರೆಸ್ ಗುರುತಿಸಿತ್ತು. ಪಿ.ಆರ್. ರಮೇಶ್ ಅವರು ಮೂರು ಬಾರಿ ಬಿಬಿಎಂಪಿ ಸದಸ್ಯರಾಗಲು ಅವಕಾಶ ಕಲ್ಪಿಸಿತ್ತು. ಒಂದು ಬಾರಿ ಮೇಯರ್ ಆಗಿದ್ದರು. ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿದ್ದರು. 2017ರಲ್ಲಿ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಅದರ ಅವಧಿ ಮುಗಿದು 1 ವರ್ಷ ಕಳೆದಿದೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.