ಕಲಾಪ ಆರಂಭಕ್ಕೂ ಮೊದಲು ಸದನದ ಕಲಾಪ ಸಲಹಾ ಸಮಿತಿ ಸಭೆ ನಡೆಯಿತು. ಹಾಲಿ ಶಾಸಕರು ನಿಧನರಾಗಿರುವ ಕಾರಣದಿಂದ ಸಂತಾಪ ಸೂಚನದ ಬಳಿಕ ದಿನದ ಮಟ್ಟಿಗೆ ಕಲಾಪ ಮುಂದೂಡುವ ನಿರ್ಣಯ ಕೈಗೊಳ್ಳಲಾಗಿತ್ತು.
ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂತಾಪ ಸೂಚನಾ ನಿರ್ಣಯ ಮಂಡಿಸಿದರು. ಕಾನೂನು ಸಚಿವ ಎಚ್.ಕೆ. ಪಾಟೀಲ, ಸಭಾ ನಾಯಕ ಎನ್.ಎಸ್. ಬೋಸರಾಜು, ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಹಲವರು ಮಾತನಾಡಿದರು. ಬಳಿಕ ಒಂದು ನಿಮಿಷ ಮೌನಾಚರಣೆಯೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂತಾಪ ಸೂಚನಾ ನಿರ್ಣಯದ ನಂತರ ಕಲಾಪ ಮುಂದೂಡಲಾಯಿತು.