‘ಗೋವಾದಲ್ಲಿ ಸಹ ಬಿಜೆಪಿ ಸರ್ಕಾರ ಇದೆ, ಕನ್ನಡಿಗರಿಗೆ ಯಾವುದೇ ತೊಂದರೆ ಕೊಡುವುದಿಲ್ಲ ಎಂದು ಅಲ್ಲಿನ ಮುಖ್ಯಮಂತ್ರಿ ಅವರೇ ತಿಳಿಸಿದ್ದಾರೆ, ಒಂದು ರಾಜಕೀಯ ಪಕ್ಷ ತನ್ನ ಉದ್ದೇಶ ಈಡೇರಿಸಿಕೊಳ್ಳಲು ಮಾಡಿರುವ ತಂತ್ರ ಇದು, ಇಟಲಿ, ಇಂಗ್ಲೆಂಡ್ ಗಳಂತಹ ದೇಶಗಳಿಂದಲೇ ತನ್ನ ಪ್ರಜೆಗಳನ್ನು ಭಾರತ ಸರ್ಕಾರ ರಕ್ಷಿಸಿದೆ, ಗೋವಾದಲ್ಲಿ ಕನ್ನಡಿಗರ ಹಿತ ರಕ್ಷಣೆಗೆ ಸಹ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು. ಈ ಉತ್ತರದಿಂದ ಕೆರಳಿದ ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ ಅವರು ಇತರ ಸದಸ್ಯರೊಂದಿಗೆ ಸಭಾಪತಿ ಪೀಠದ ಮುಂಭಾಗಕ್ಕೆ ಬಂದು ಧರಣಿ ಆರಂಭಿಸಿದರು. ಕೆಲವರು ಘೋಷಣೆ ಕೂಗಿದರು. ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ 15 ನಿಮಿಷಕಲಾಪ ಮುಂದೂಡಿದರು.