<p><strong>ಬೆಂಗಳೂರು: </strong>ಇದೇ 17ರಿಂದ 20ರವರೆಗೆ ವಿಧಾನ ಮಂಡಲದ ಜಂಟಿ ಅಧಿವೇಶನ ಜರುಗಲಿದ್ದು, ಇದರ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<p>ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಈ ಕುರಿತು ಆದೇಶ ಹೊರಡಿಸಿದ್ದಾರೆ.</p>.<p>‘ಜಂಟಿ ಅಧಿವೇಶನದ ಪ್ರಯುಕ್ತ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘ-ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆ, ಸತ್ಯಾಗ್ರಹ, ಮೆರವಣಿಗೆ ನಡೆಸುವ ಸಾಧ್ಯತೆ ಇದೆ. ಈ ರೀತಿಯಾದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಲಿದೆ. ಹೀಗಾಗಿ, ಫೆ. 17ರ ಬೆಳಿಗ್ಗೆ 6 ಗಂಟೆಯಿಂದ 20ರ ತಡರಾತ್ರಿ 12 ಗಂಟೆವರೆಗೆ ವಿಧಾನಸೌಧದ 2 ಕಿ.ಮೀ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.</p>.<p>‘5ಕ್ಕಿಂತ ಹೆಚ್ಚು ಜನ ಗುಂಪು ಕಟ್ಟಿಕೊಂಡು ಸೇರುವಂತಿಲ್ಲ. ಮೆರವಣಿಗೆ ಅಥವಾ ಸಭೆ ನಡೆಸುವಂತಿಲ್ಲ. ಪಟಾಕಿ ಸಿಡಿಸುವುದನ್ನೂ ನಿರ್ಬಂಧಿಸಲಾಗಿದೆ. ಅಪಾಯಕಾರಿ ಆಯುಧವನ್ನೂ ವಿಧಾನಸೌಧದ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದೂ ಆದೇಶದಲ್ಲಿ ಎಚ್ಚರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಇದೇ 17ರಿಂದ 20ರವರೆಗೆ ವಿಧಾನ ಮಂಡಲದ ಜಂಟಿ ಅಧಿವೇಶನ ಜರುಗಲಿದ್ದು, ಇದರ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p>.<p>ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಈ ಕುರಿತು ಆದೇಶ ಹೊರಡಿಸಿದ್ದಾರೆ.</p>.<p>‘ಜಂಟಿ ಅಧಿವೇಶನದ ಪ್ರಯುಕ್ತ ವಿವಿಧ ರಾಜಕೀಯ ಪಕ್ಷಗಳು ಹಾಗೂ ಸಂಘ-ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆ, ಸತ್ಯಾಗ್ರಹ, ಮೆರವಣಿಗೆ ನಡೆಸುವ ಸಾಧ್ಯತೆ ಇದೆ. ಈ ರೀತಿಯಾದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಲಿದೆ. ಹೀಗಾಗಿ, ಫೆ. 17ರ ಬೆಳಿಗ್ಗೆ 6 ಗಂಟೆಯಿಂದ 20ರ ತಡರಾತ್ರಿ 12 ಗಂಟೆವರೆಗೆ ವಿಧಾನಸೌಧದ 2 ಕಿ.ಮೀ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದು ಆದೇಶದಲ್ಲಿ ಹೇಳಲಾಗಿದೆ.</p>.<p>‘5ಕ್ಕಿಂತ ಹೆಚ್ಚು ಜನ ಗುಂಪು ಕಟ್ಟಿಕೊಂಡು ಸೇರುವಂತಿಲ್ಲ. ಮೆರವಣಿಗೆ ಅಥವಾ ಸಭೆ ನಡೆಸುವಂತಿಲ್ಲ. ಪಟಾಕಿ ಸಿಡಿಸುವುದನ್ನೂ ನಿರ್ಬಂಧಿಸಲಾಗಿದೆ. ಅಪಾಯಕಾರಿ ಆಯುಧವನ್ನೂ ವಿಧಾನಸೌಧದ ಒಳಗೆ ತೆಗೆದುಕೊಂಡು ಹೋಗುವಂತಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದೂ ಆದೇಶದಲ್ಲಿ ಎಚ್ಚರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>