<p><strong>ಬೆಂಗಳೂರು:</strong> ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಇದೇ 12ರಂದುವಿಧಾನಸೌಧ ಚಲೋ ಹಮ್ಮಿಕೊಂಡಿದೆ.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ವೇದಿಕೆಯ ಅಧ್ಯಕ್ಷ ಎ.ರವೀಂದ್ರ ನಾಯ್ಕ,‘ಜಿಲ್ಲೆಯಲ್ಲಿ 8,500 ಚ.ಕಿ.ಮೀ ವಿಸ್ತೀರ್ಣದ ಅರಣ್ಯ ಭೂಮಿಯಿದೆ. ಅರಣ್ಯವಾಸಿಗಳು ಹಕ್ಕುಪತ್ರ ಬಯಸಿ ಸಲ್ಲಿಸಿದ 87,625 ಅರ್ಜಿಗಳಲ್ಲಿ ಕೇವಲ 2,852 ಅರ್ಜಿ ಪುರಸ್ಕರಿಸಿರುವುದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ತಿಳಿಸಿದರು.</p>.<p>‘ಬುಡಕಟ್ಟು ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕು ಕಾಯ್ದೆಯಲ್ಲಿ ಹಕ್ಕುಪತ್ರ ನೀಡುವ ಸಂದರ್ಭದಲ್ಲಿ ನಿರ್ದಿಷ್ಟ ದಾಖಲಾತಿಗೆ ಒತ್ತಾಯಿಸಬಾರದು ಎಂದಿದೆ. ಆದರೂ ಸೂಕ್ತ ದಾಖಲೆನೀಡಿಲ್ಲ ಎಂದು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಇವರನ್ನು ಒಕ್ಕಲೆಬ್ಬಿಸುವ ಪ್ರಯತ್ನವೂ ನಡೆಯುತ್ತಿದೆ. ಹೀಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>‘ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ, ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿ ಬಿಸಿ ಮುಟ್ಟಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉತ್ತರ ಕನ್ನಡ ಜಿಲ್ಲೆಯ ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಇದೇ 12ರಂದುವಿಧಾನಸೌಧ ಚಲೋ ಹಮ್ಮಿಕೊಂಡಿದೆ.</p>.<p>ಇಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ವೇದಿಕೆಯ ಅಧ್ಯಕ್ಷ ಎ.ರವೀಂದ್ರ ನಾಯ್ಕ,‘ಜಿಲ್ಲೆಯಲ್ಲಿ 8,500 ಚ.ಕಿ.ಮೀ ವಿಸ್ತೀರ್ಣದ ಅರಣ್ಯ ಭೂಮಿಯಿದೆ. ಅರಣ್ಯವಾಸಿಗಳು ಹಕ್ಕುಪತ್ರ ಬಯಸಿ ಸಲ್ಲಿಸಿದ 87,625 ಅರ್ಜಿಗಳಲ್ಲಿ ಕೇವಲ 2,852 ಅರ್ಜಿ ಪುರಸ್ಕರಿಸಿರುವುದರಿಂದ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ತಿಳಿಸಿದರು.</p>.<p>‘ಬುಡಕಟ್ಟು ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ ಅರಣ್ಯ ಹಕ್ಕು ಕಾಯ್ದೆಯಲ್ಲಿ ಹಕ್ಕುಪತ್ರ ನೀಡುವ ಸಂದರ್ಭದಲ್ಲಿ ನಿರ್ದಿಷ್ಟ ದಾಖಲಾತಿಗೆ ಒತ್ತಾಯಿಸಬಾರದು ಎಂದಿದೆ. ಆದರೂ ಸೂಕ್ತ ದಾಖಲೆನೀಡಿಲ್ಲ ಎಂದು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಇವರನ್ನು ಒಕ್ಕಲೆಬ್ಬಿಸುವ ಪ್ರಯತ್ನವೂ ನಡೆಯುತ್ತಿದೆ. ಹೀಗಾಗಿ ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p>‘ಹೋರಾಟಕ್ಕೆ ಸರ್ಕಾರ ಸ್ಪಂದಿಸದಿದ್ದರೆ, ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸಿ ಬಿಸಿ ಮುಟ್ಟಿಸುತ್ತೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>