<p><strong>ಬೆಂಗಳೂರು</strong>: ‘ಪ್ರಶಸ್ತಿ ಸ್ವೀಕರಿಸುವವರು ಶುದ್ಧವಾಗಿರಬೇಕು ಹಾಗೂ ಪ್ರಶಸ್ತಿ ನೀಡುವವರು ಸಹ ಅಷ್ಟೇ ಪರಿಶುದ್ಧರಾಗಿರಬೇಕು’ ಎಂದು ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದರು.</p>.<p>ನಗರದಲ್ಲಿ ಗುರುವಾರ ಏರ್ಪಡಿಸಿದ್ದ ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ 26ನೇ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಹಣ ಕೊಟ್ಟು ಪ್ರಶಸ್ತಿಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲವೂ ವ್ಯಾಪಾರವಾಗಿದೆ. ನಿತ್ಯ ಪತ್ರಿಕೆಗಳಲ್ಲಿ ಈ ರೀತಿಯ ಸುದ್ದಿಗಳನ್ನು ನೋಡುತ್ತಿದ್ಧೇವೆ. ಆದರೆ, ರಾಘವೇಂದ್ರ ಸೇವಾ ಪ್ರತಿಷ್ಠಾನ ನಿಜವಾದ ಸಾಧಕರನ್ನು ಗುರುತಿಸಿ ಪ್ರಶಸ್ತಿ, ನೀಡುವ ಮೂಲಕ ಒಳ್ಳೆಯ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.</p>.<p>ಇದೇ ವೇಳೆ ‘ಗುರು ರಾಘವೇಂದ್ರ ಸಂಸ್ಮರಣ ಮರಣೋತ್ತರ ಪ್ರಶಸ್ತಿ’ಯನ್ನು ಮಾಧವ ಗುರುರಾಜಾಚಾರ್ ಗುಡಿ ಅವರ ಪರವಾಗಿ ರಮಾ ಮಾಧವ ಗುಡಿ ಪ್ರಶಸ್ತಿ ಸ್ವೀಕರಿಸಿದರು.</p>.<p>‘50ನೇ ವರ್ಷದ ಜೀವಮಾನ ಸಂಗೀತ ಸಾಧನಾ ಪ್ರಶಸ್ತಿ’ ಹಾಗೂ ‘ಶ್ರೀ ರಾಘವೇಂದ್ರ ಹರಿದಾಸ ಸಂಗೀತ ಸೇವಾ ಶಿರೋಮಣಿ’ ಪ್ರಶಸ್ತಿಯನ್ನು ಗಾಯಕ ವಿದ್ಯಾಭೂಷಣ ಅವರಿಗೆ ನೀಡಲಾಯಿತು.</p>.<p>ಇದಕ್ಕೂ ಮುನ್ನ ಸೋಸಲೆ ಸಮೀರಾಚಾರ್, ವಸಂತ್ ಕುಮಾರ್ ಕುಂಬಳೆ, ಕೆ.ಎಸ್.ಸುನಿಲ್, ಎಂ.ಸಿ. ಶ್ರೀನಿವಾಸ್ ಅವರು ಪುರಂದರ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ವಿದ್ವಾಂಸ ಆರ್.ಕೆ.ಪದ್ಮಾನಾಭ ಅಧ್ಯಕ್ಷತೆ ವಹಿಸಿದ್ದರು. ಸಂಗೀತ ನಿರ್ದೇಶಕ ಪುತ್ತೂರು ನರಸಿಂಹನಾಯಕ್ ಹಾಜರಿದ್ದರು. ಪ್ರತಿಷ್ಠಾನದ ಅಧ್ಯಕ್ಷೆ ಗೌರಿ ನಾಗರಾಜ್, ಕಾರ್ಯದರ್ಶಿ ನಾಗರಾಜ್, ಉಪಾಧ್ಯಕ್ಷೆ ವೀಣಾ ಸುರೇಶ್, ದೇವಸ್ಥಾನದ ಉಪಾಧ್ಯಕ್ಷ ಬಾಲಚಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪ್ರಶಸ್ತಿ ಸ್ವೀಕರಿಸುವವರು ಶುದ್ಧವಾಗಿರಬೇಕು ಹಾಗೂ ಪ್ರಶಸ್ತಿ ನೀಡುವವರು ಸಹ ಅಷ್ಟೇ ಪರಿಶುದ್ಧರಾಗಿರಬೇಕು’ ಎಂದು ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದರು.</p>.<p>ನಗರದಲ್ಲಿ ಗುರುವಾರ ಏರ್ಪಡಿಸಿದ್ದ ರಾಘವೇಂದ್ರ ಸಂಗೀತ ಸೇವಾ ಪ್ರತಿಷ್ಠಾನದ 26ನೇ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಹಣ ಕೊಟ್ಟು ಪ್ರಶಸ್ತಿಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಎಲ್ಲವೂ ವ್ಯಾಪಾರವಾಗಿದೆ. ನಿತ್ಯ ಪತ್ರಿಕೆಗಳಲ್ಲಿ ಈ ರೀತಿಯ ಸುದ್ದಿಗಳನ್ನು ನೋಡುತ್ತಿದ್ಧೇವೆ. ಆದರೆ, ರಾಘವೇಂದ್ರ ಸೇವಾ ಪ್ರತಿಷ್ಠಾನ ನಿಜವಾದ ಸಾಧಕರನ್ನು ಗುರುತಿಸಿ ಪ್ರಶಸ್ತಿ, ನೀಡುವ ಮೂಲಕ ಒಳ್ಳೆಯ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.</p>.<p>ಇದೇ ವೇಳೆ ‘ಗುರು ರಾಘವೇಂದ್ರ ಸಂಸ್ಮರಣ ಮರಣೋತ್ತರ ಪ್ರಶಸ್ತಿ’ಯನ್ನು ಮಾಧವ ಗುರುರಾಜಾಚಾರ್ ಗುಡಿ ಅವರ ಪರವಾಗಿ ರಮಾ ಮಾಧವ ಗುಡಿ ಪ್ರಶಸ್ತಿ ಸ್ವೀಕರಿಸಿದರು.</p>.<p>‘50ನೇ ವರ್ಷದ ಜೀವಮಾನ ಸಂಗೀತ ಸಾಧನಾ ಪ್ರಶಸ್ತಿ’ ಹಾಗೂ ‘ಶ್ರೀ ರಾಘವೇಂದ್ರ ಹರಿದಾಸ ಸಂಗೀತ ಸೇವಾ ಶಿರೋಮಣಿ’ ಪ್ರಶಸ್ತಿಯನ್ನು ಗಾಯಕ ವಿದ್ಯಾಭೂಷಣ ಅವರಿಗೆ ನೀಡಲಾಯಿತು.</p>.<p>ಇದಕ್ಕೂ ಮುನ್ನ ಸೋಸಲೆ ಸಮೀರಾಚಾರ್, ವಸಂತ್ ಕುಮಾರ್ ಕುಂಬಳೆ, ಕೆ.ಎಸ್.ಸುನಿಲ್, ಎಂ.ಸಿ. ಶ್ರೀನಿವಾಸ್ ಅವರು ಪುರಂದರ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.</p>.<p>ವಿದ್ವಾಂಸ ಆರ್.ಕೆ.ಪದ್ಮಾನಾಭ ಅಧ್ಯಕ್ಷತೆ ವಹಿಸಿದ್ದರು. ಸಂಗೀತ ನಿರ್ದೇಶಕ ಪುತ್ತೂರು ನರಸಿಂಹನಾಯಕ್ ಹಾಜರಿದ್ದರು. ಪ್ರತಿಷ್ಠಾನದ ಅಧ್ಯಕ್ಷೆ ಗೌರಿ ನಾಗರಾಜ್, ಕಾರ್ಯದರ್ಶಿ ನಾಗರಾಜ್, ಉಪಾಧ್ಯಕ್ಷೆ ವೀಣಾ ಸುರೇಶ್, ದೇವಸ್ಥಾನದ ಉಪಾಧ್ಯಕ್ಷ ಬಾಲಚಂದ್ರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>