<p><strong>ಬೆಂಗಳೂರು: </strong>‘ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿಯೂ ಮಕ್ಕಳು ಪಾಠ–ಪ್ರವಚನಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿದ್ಯಾಗಮ ಯೋಜನೆ ಜಾರಿಗೆ ತಂದಿದ್ದು, ಇದು ಗುರುಕುಲ ಮಾದರಿ ಶಿಕ್ಷಣವನ್ನು ನೆನಪಿಸುತ್ತದೆ. ಇದರಿಂದ ನಮ್ಮ ಸಂಸ್ಕೃತಿಯ ಪುನರುತ್ಥಾನವಾದಂತಾಗಿದೆ’ ಎಂದುಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು.</p>.<p>ಈ ಯೋಜನೆ ಕುರಿತಂತೆ ರಾಜ್ಯದ ಎಲ್ಲ ಉಪನಿರ್ದೇಶಕರು, ಡಯಟ್ ಪ್ರಾಚಾರ್ಯರು, ಕ್ಷೇತ್ರಶಿಕ್ಷಣಾಧಿಕಾರಿಗೊಂದಿಗೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ‘ಪ್ರತಿ ಹಳ್ಳಿಯ ಮಕ್ಕಳಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖವಾಗಬೇಕು’ ಎಂದು ಸೂಚಿಸಿದರು.</p>.<p>‘ಎಲ್ಲ ಮಕ್ಕಳಿಗೂ ತಂತ್ರಜ್ಞಾನಾಧಾರಿತ ಶಿಕ್ಷಣ ದೊರೆಯುವಂತೆ ಮಾಡುವುದು ಮತ್ತು ಶಿಕ್ಷಕರು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವ ಮೂಲಕ ಮಕ್ಕಳ ಮನೋಸ್ಥೈರ್ಯವನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶ’ ಎಂದರು.</p>.<p>‘ಕಲಿಕೆಯಲ್ಲಿ ವಿಳಂಬವಾದರೆ, ಶಾಲೆ ತೊರೆಯುವ ಮಕ್ಕಳ ಸಂಖ್ಯೆ ಹೆಚ್ಚುತ್ತದೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧಂತಿಯಂತ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆಯೂ ಇದೆ. ಇದಕ್ಕೆ ಅವಕಾಶ ಕೊಡಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದದೆ’ ಎಂದರು.</p>.<p>‘ಮೊಬೈಲ್ ಫೋನ್, ಟಿವಿ ಮೂಲಕ,ಪಡಸಾಲೆಗಳಲ್ಲಿ, ಶಾಲಾ ಆವರಣಗಳಲ್ಲಿ, ಮರಗಳ ನೆರಳಿನಲ್ಲಿ ನಡೆಸಬಹುದಾದ ಈ ತರಗತಿಗಳಿಗೆ ಅನುಕೂಲವಾಗುವಂತೆ ಶಿಕ್ಷಕರು ಕಲಿಕಾ ಸಾಮಗ್ರಿಗಳನ್ನು ರೂಪಿಸಿಕೊಳ್ಳಬೇಕು. ನಮ್ಮ ಇಲಾಖೆಗಾಗಿಯೇ ಪ್ರತ್ಯೇಕ ಎರಡು ದೂರದರ್ಶನ ಚಾನೆಲ್ಗಳನ್ನು ಕೇಳಿದ್ದು, ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿದಿದೆ’ ಎಂದೂ ಅವರು ತಿಳಿಸಿದರು.</p>.<p class="Subhead">ವಿಧಾನಪರಿಷತ್ ಸದಸ್ಯರೊಂದಿಗೆ ಸಂವಾದ:</p>.<p class="Subhead">ಈ ಯೋಜನೆಯ ಅನುಷ್ಠಾನ ಕುರಿತಂತೆ,ರಾಜ್ಯದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ವೆಬಿನಾರ್ ಮೂಲಕ ಸಚಿವರು ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿಯೂ ಮಕ್ಕಳು ಪಾಠ–ಪ್ರವಚನಗಳಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿದ್ಯಾಗಮ ಯೋಜನೆ ಜಾರಿಗೆ ತಂದಿದ್ದು, ಇದು ಗುರುಕುಲ ಮಾದರಿ ಶಿಕ್ಷಣವನ್ನು ನೆನಪಿಸುತ್ತದೆ. ಇದರಿಂದ ನಮ್ಮ ಸಂಸ್ಕೃತಿಯ ಪುನರುತ್ಥಾನವಾದಂತಾಗಿದೆ’ ಎಂದುಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಹೇಳಿದರು.</p>.<p>ಈ ಯೋಜನೆ ಕುರಿತಂತೆ ರಾಜ್ಯದ ಎಲ್ಲ ಉಪನಿರ್ದೇಶಕರು, ಡಯಟ್ ಪ್ರಾಚಾರ್ಯರು, ಕ್ಷೇತ್ರಶಿಕ್ಷಣಾಧಿಕಾರಿಗೊಂದಿಗೆ ಶುಕ್ರವಾರ ವಿಡಿಯೊ ಸಂವಾದ ನಡೆಸಿದ ಅವರು, ‘ಪ್ರತಿ ಹಳ್ಳಿಯ ಮಕ್ಕಳಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖವಾಗಬೇಕು’ ಎಂದು ಸೂಚಿಸಿದರು.</p>.<p>‘ಎಲ್ಲ ಮಕ್ಕಳಿಗೂ ತಂತ್ರಜ್ಞಾನಾಧಾರಿತ ಶಿಕ್ಷಣ ದೊರೆಯುವಂತೆ ಮಾಡುವುದು ಮತ್ತು ಶಿಕ್ಷಕರು ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುವ ಮೂಲಕ ಮಕ್ಕಳ ಮನೋಸ್ಥೈರ್ಯವನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶ’ ಎಂದರು.</p>.<p>‘ಕಲಿಕೆಯಲ್ಲಿ ವಿಳಂಬವಾದರೆ, ಶಾಲೆ ತೊರೆಯುವ ಮಕ್ಕಳ ಸಂಖ್ಯೆ ಹೆಚ್ಚುತ್ತದೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧಂತಿಯಂತ ಸಾಮಾಜಿಕ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆಯೂ ಇದೆ. ಇದಕ್ಕೆ ಅವಕಾಶ ಕೊಡಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದದೆ’ ಎಂದರು.</p>.<p>‘ಮೊಬೈಲ್ ಫೋನ್, ಟಿವಿ ಮೂಲಕ,ಪಡಸಾಲೆಗಳಲ್ಲಿ, ಶಾಲಾ ಆವರಣಗಳಲ್ಲಿ, ಮರಗಳ ನೆರಳಿನಲ್ಲಿ ನಡೆಸಬಹುದಾದ ಈ ತರಗತಿಗಳಿಗೆ ಅನುಕೂಲವಾಗುವಂತೆ ಶಿಕ್ಷಕರು ಕಲಿಕಾ ಸಾಮಗ್ರಿಗಳನ್ನು ರೂಪಿಸಿಕೊಳ್ಳಬೇಕು. ನಮ್ಮ ಇಲಾಖೆಗಾಗಿಯೇ ಪ್ರತ್ಯೇಕ ಎರಡು ದೂರದರ್ಶನ ಚಾನೆಲ್ಗಳನ್ನು ಕೇಳಿದ್ದು, ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿದಿದೆ’ ಎಂದೂ ಅವರು ತಿಳಿಸಿದರು.</p>.<p class="Subhead">ವಿಧಾನಪರಿಷತ್ ಸದಸ್ಯರೊಂದಿಗೆ ಸಂವಾದ:</p>.<p class="Subhead">ಈ ಯೋಜನೆಯ ಅನುಷ್ಠಾನ ಕುರಿತಂತೆ,ರಾಜ್ಯದ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ವೆಬಿನಾರ್ ಮೂಲಕ ಸಚಿವರು ಸಂವಾದ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>