‘ಅರ್ಜಿ ಸಲ್ಲಿಸುವ ವೇಳೆ ತಾಂತ್ರಿಕ ದೋಷಗಳು ಹೆಚ್ಚಾಗಿವೆ. ಅರ್ಜಿ ಪರಿಶೀಲನೆ ನಂತರ ಮಂಜೂರಾಗದೇ ವಿಳಂಬ ಮಾಡಲಾಗುತ್ತಿದೆ. ಇದು ಅಲ್ಪಸಂಖ್ಯಾತ ಇಲಾಖೆಯ ವೈಫಲ್ಯ ಎತ್ತಿ ತೋರುತ್ತಿದೆ. ಈ ಬಗ್ಗೆ ಅಧಿಕಾರಿಗಳನ್ನು ಭೇಟಿ ಮಾಡಿದಾಗ ಅಸಡ್ಡೆ ತೋರುತ್ತಾರೆ. ವಿದ್ಯಾರ್ಥಿವೇತನ ಪಡೆಯದ ಕಾರಣ ಕಾಲೇಜಿನ ಶುಲ್ಕ ಪಾವತಿಗೆ ಸಮಸ್ಯೆಯಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪಡೆಯದೆ ಅತಂತ್ರರಾಗಿದ್ದಾರೆ’ ಎಂದು ಸಂಘಟನೆಯ ಪದಾಧಿಕಾರಿಗಳು ದೂರಿದರು.