‘ಕಳೆದ ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಗೆ ಮುನ್ನ ಕ್ಷೇತ್ರದ ಶಾಸಕ ಕೃಷ್ಣ ಬೈರೇಗೌಡ ಅವರು ಬಡಾವಣೆಗೆ ಕಾವೇರಿ ನೀರು ಪೂರೈಕೆಗೆ ಚಾಲನೆ ನೀಡಿದರು. ಆ ನಂತರ, ಶಾಸಕರು ಮತ್ತು ಜಲಮಂಡಳಿ ಮುಖ್ಯ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಉಪಸ್ಥಿತಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಪ್ರತಿ ಶನಿವಾರ ನೀರು ಪೂರೈಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದರು. ಆದರೆ, ನಾಲ್ಕು ವರ್ಷಗಳಲ್ಲಿ ಒಂದು ತಿಂಗಳು ಸಹ ನಾಲ್ಕೂ ವಾರ ನೀರು ಪೂರೈಸಿಲ್ಲ’ ಎಂದು ದೂರಿದ್ದಾರೆ.