ಶನಿವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅನಧಿಕೃತ ನಿರ್ಮಾಣಗಳನ್ನು ಸಕ್ರಮ ಗೊಳಿಸುವುದಕ್ಕೆ ರೂಪಿಸಿದ್ದ ಕಾಯ್ದೆ ಯನ್ನು ಪ್ರಶ್ನಿಸಿರುವ ಅರ್ಜಿ ಸುಪ್ರೀಂ ಕೋರ್ಟ್ನಲ್ಲಿ ಬಾಕಿ ಇದೆ. ಆದರೆ, ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿರುವವರಿಗೆ ಹೈಕೋರ್ಟ್ ನಿರ್ದೇಶನದ ಅನುಸಾರ ನೋಟಿಸ್ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದ ರಿಂದ ಬೆಂಗಳೂರಿನ 20 ಲಕ್ಷಕ್ಕೂ ಹೆಚ್ಚು ಜನರು ತೊಂದರೆಗೆ ಸಿಲುಕುತ್ತಾರೆ’ ಎಂದರು.