ರೈಲಿನಲ್ಲಿ ಪರಾರಿ: ‘ಆಗಸ್ಟ್ 11ರಂದು ರಾತ್ರಿ ಗಲಭೆ ನಡೆದಿತ್ತು. ಅದರ ಮರುದಿನವೇ ರೈಲಿನಲ್ಲಿ ಹುಬ್ಬಳ್ಳಿಗೆ ಹೋಗಿದ್ದ ಆರೋಪಿ ಮುದಾಸೀರ್, ಅಲ್ಲಿ ಕೆಲದಿನ ನೆಲೆಸಿದ್ದ. ನಂತರ, ಅಲ್ಲಿಂದ ದೆಹಲಿಗೆ ವಾಸ್ತವ್ಯ ಬದಲಿಸಿದ್ದ. ಆ ಬಗ್ಗೆ ಪೊಲೀಸರಿಗೆ ಸುಳಿವು ಸಿಗುತ್ತಿದ್ದಂತೆ ಅಲ್ಲಿಂದಲೂ ಪರಾರಿಯಾಗಿದ್ದ’ ಎಂದು ಸಿಸಿಬಿ ಮೂಲಗಳು ಹೇಳಿವೆ.