ಹೈಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್, ‘ಬೆಂಗಳೂರಿನಲ್ಲಿ ಪ್ರತಿದಿನ ಸಂಚಾರ ನಿಯಮ ಉಲ್ಲಂಘನೆಯ 9 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ. ಈ ಪ್ರಕರಣಗಳಲ್ಲಿ ದಂಡ ಕಟ್ಟಲು ಕೋರ್ಟ್ಗೆ ಖುದ್ದಾಗಿ ಬರಲು ಹಲವರಿಗೆ ಸಾಧ್ಯವಾಗುತ್ತಿಲ್ಲ. ಇನ್ನು ಮುಂದೆ ವರ್ಚುಯಲ್ ಕೋರ್ಟ್ ವ್ಯವಸ್ಥೆಯಲ್ಲಿ ಆನ್ಲೈನ್ ಮೂಲಕವೇ ದಂಡ ಪಾವತಿಸಬಹುದು‘ ಎಂದರು.