ಬೆಂಗಳೂರು: ವಿಶ್ವಕರ್ಮ ಸಮು ದಾಯವನ್ನು ಒಗ್ಗೂಡಿಸುವ ಉದ್ದೇಶ ದಿಂದ ದಾವಣಗೆರೆಯ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಜುಲೈ 11ರಂದು ವಿಶ್ವಕರ್ಮ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತಿಳಿಸಿದೆ.
‘ಮಠಾಧೀಶರು, ಪೀಠಾಧಿಪತಿಗಳ ಸಮ್ಮಿಲನ, ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಪುರೋಹಿತರನ್ನು ಸನ್ಮಾನಿ ಸಲಾಗುತ್ತದೆ. ಹಟ್ಟಿ ಚಿನ್ನದ ಗಣಿ ಕಂಪನಿಗೆ ವಿಶ್ವಕರ್ಮ ಸಮುದಾಯದವರನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ರಾಜ್ಯ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಒತ್ತಾಯಿಸಿದರು.