ಕಸಾಪ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯ ಆಯ್ಕೆ ಸಮಿತಿ ಪ್ರಶಸ್ತಿಗಳನ್ನು ಶುಕ್ರವಾರ ಘೋಷಿಸಿದೆ. ವಿಷ್ಣುವರ್ಧನ್ ಕಲಾ ದತ್ತಿ ಪ್ರಶಸ್ತಿ ₹ 25ಸಾವಿರ ಹಾಗೂ ‘ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧಿ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿ’ ₹10ಸಾವಿರ ನಗದು ಬಹುಮಾನ ಹೊಂದಿದೆ. ಅ.11ರಂದು ಸಂಜೆ 5.30ಕ್ಕೆ ಪರಿಷತ್ತಿನಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.