<p><strong>ಬೆಂಗಳೂರು:</strong> ಗೋಕರ್ಣದ ಅಶೋಕೆಯಲ್ಲಿ ನಿರ್ಮಿಸಲಾಗುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠವು ಮುಂಬರುವ ಅಕ್ಷಯ ತೃತೀಯದಂದು (2020 ಏ. 26) ಕಾರ್ಯಾರಂಭ ಮಾಡಲಿದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿ ತಿಳಿಸಿದರು.</p>.<p>ಗುರುವಾರ ಇಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ‘ತಕ್ಷಶಿಲಾ ವಿಶ್ವವಿದ್ಯಾಲಯದ ಮಾದರಿಯಲ್ಲೇ ಕಾರ್ಯನಿರ್ವಹಿಸಲಿರುವ ಈ ವಿದ್ಯಾಪೀಠವು ಎಲ್ಲ ಭಾರತೀಯ ವಿದ್ಯೆಗಳನ್ನು ಹಾಗೂ ಕಲೆಗಳನ್ನುಪರಿಪೂರ್ಣವಾಗಿ ಕಲಿಸುವ ಕೇಂದ್ರವಾಗಲಿದೆ. ಆತ್ಮವಿಶ್ವಾಸ ವೃದ್ಧಿಗಾಗಿ ಸಮರ ಕಲೆಗಳನ್ನೂ ಕಲಿಸಲಿದ್ದೇವೆ’ ಎಂದರು.</p>.<p>‘ಮೊದಲ ಎರಡು ವರ್ಷ ಎಲ್ಲ ವಿದ್ಯೆಗಳ ಸ್ಥೂಲ ಪರಿಚಯ ಮಾಡಿಕೊಡಲಾಗುವುದು. ನಂತರ ನಿರ್ದಿಷ್ಟ ವಿದ್ಯೆಯಲ್ಲಿ ಹೆಚ್ಚಿನ ಸಾಧನೆಗೆ ಅವಕಾಶ ಮಾಡಿಕೊಡಲಾಗುತ್ತದೆ. ದೇಶದ ಶ್ರೇಷ್ಠ ಆಚಾರ್ಯರನ್ನು ನೇಮಿಸಿಕೊಳ್ಳಲಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<p>‘ಮೊದಲ ವರ್ಷ 100 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಲಿದ್ದೇವೆ. ನಂತರ ಪ್ರತಿ ಕೋರ್ಸ್ಗೆ ತಲಾ 20 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುತ್ತೇವೆ. ವಿದೇಶಿ ವಿದ್ಯಾರ್ಥಿಗಳೂ ಸೇರಿದಂತೆ ಇಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ. ಆದರೆ ಪ್ರವೇಶ ಪರೀಕ್ಷೆ ಇದ್ದೇ ಇರುತ್ತದೆ. ಪ್ರವೇಶಕ್ಕೆ ಕನಿಷ್ಠ 6 ವರ್ಷ ತುಂಬಿರಬೇಕು. 40 ವರ್ಷ ದಾಟಿದವರ ವ್ಯಾಸಂಗಕ್ಕೂ ಪೂರಕ ಕೋರ್ಸ್ ಆರಂಭಿಸಲಿದ್ದೇವೆ’ ಎಂದರು.</p>.<p>‘ವಿದ್ಯಾರ್ಥಿಗಳಿಗೆ ಶುಲ್ಕ ವಿಧಿಸುತ್ತೇವೆ. ಶುಲ್ಕ ಪಾವತಿಸಲು ಸಾಧ್ಯವಾಗದವರಿಗೆ ವಿದ್ಯಾರ್ಥಿವೇತನಕ್ಕೆ ವ್ಯವಸ್ಥೆ ಮಾಡುತ್ತೇವೆ. ಮಠದ ನೆರವಿನಿಂದ ನಡೆಯುವ ಈ ವಿದ್ಯಾಪೀಠ ನಿರ್ವಹಣೆಗೆ ಭಕ್ತರೂ ಕೈಜೋಡಿಸಲಿದ್ದಾರೆ. ಈ ಯೋಜನೆಗೆ ಸರ್ಕಾರದಿಂದ ನಯಾಪೈಸೆಯನ್ನೂ ಕೇಳುವುದಿಲ್ಲ ಎಂದು ಸಂಕಲ್ಪ ಮಾಡಿದ್ದೇವೆ’ ಎಂದು ಸ್ಪಷ್ಟಪಡಿಸಿದರು.</p>.<p>***</p>.<p>ಭಾರತೀಯ ವಿದ್ಯೆಗಳನ್ನು ಕಲಿತವರಿಗೆ ಉದ್ಯೋಗದ ಕೊರತೆ ಎದುರಾಗದು. ಭಾರತೀಯ ವಿದ್ಯೆಯಲ್ಲಿ ಈಗಲೂ ಸತ್ವವೂ ಇದೆ, ಅದನ್ನು ಅಧ್ಯಯನ ಮಾಡಿದವರಿಗೆ ಬೇಡಿಕೆಯೂ ಇದೆ.<br /><strong>-ರಾಘವೇಶ್ವರಭಾರತೀ ಸ್ವಾಮೀಜಿ, ರಾಮಚಂದ್ರಾಪುರ ಮಠ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೋಕರ್ಣದ ಅಶೋಕೆಯಲ್ಲಿ ನಿರ್ಮಿಸಲಾಗುತ್ತಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠವು ಮುಂಬರುವ ಅಕ್ಷಯ ತೃತೀಯದಂದು (2020 ಏ. 26) ಕಾರ್ಯಾರಂಭ ಮಾಡಲಿದೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿ ತಿಳಿಸಿದರು.</p>.<p>ಗುರುವಾರ ಇಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ‘ತಕ್ಷಶಿಲಾ ವಿಶ್ವವಿದ್ಯಾಲಯದ ಮಾದರಿಯಲ್ಲೇ ಕಾರ್ಯನಿರ್ವಹಿಸಲಿರುವ ಈ ವಿದ್ಯಾಪೀಠವು ಎಲ್ಲ ಭಾರತೀಯ ವಿದ್ಯೆಗಳನ್ನು ಹಾಗೂ ಕಲೆಗಳನ್ನುಪರಿಪೂರ್ಣವಾಗಿ ಕಲಿಸುವ ಕೇಂದ್ರವಾಗಲಿದೆ. ಆತ್ಮವಿಶ್ವಾಸ ವೃದ್ಧಿಗಾಗಿ ಸಮರ ಕಲೆಗಳನ್ನೂ ಕಲಿಸಲಿದ್ದೇವೆ’ ಎಂದರು.</p>.<p>‘ಮೊದಲ ಎರಡು ವರ್ಷ ಎಲ್ಲ ವಿದ್ಯೆಗಳ ಸ್ಥೂಲ ಪರಿಚಯ ಮಾಡಿಕೊಡಲಾಗುವುದು. ನಂತರ ನಿರ್ದಿಷ್ಟ ವಿದ್ಯೆಯಲ್ಲಿ ಹೆಚ್ಚಿನ ಸಾಧನೆಗೆ ಅವಕಾಶ ಮಾಡಿಕೊಡಲಾಗುತ್ತದೆ. ದೇಶದ ಶ್ರೇಷ್ಠ ಆಚಾರ್ಯರನ್ನು ನೇಮಿಸಿಕೊಳ್ಳಲಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<p>‘ಮೊದಲ ವರ್ಷ 100 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಲಿದ್ದೇವೆ. ನಂತರ ಪ್ರತಿ ಕೋರ್ಸ್ಗೆ ತಲಾ 20 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸುತ್ತೇವೆ. ವಿದೇಶಿ ವಿದ್ಯಾರ್ಥಿಗಳೂ ಸೇರಿದಂತೆ ಇಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ. ಆದರೆ ಪ್ರವೇಶ ಪರೀಕ್ಷೆ ಇದ್ದೇ ಇರುತ್ತದೆ. ಪ್ರವೇಶಕ್ಕೆ ಕನಿಷ್ಠ 6 ವರ್ಷ ತುಂಬಿರಬೇಕು. 40 ವರ್ಷ ದಾಟಿದವರ ವ್ಯಾಸಂಗಕ್ಕೂ ಪೂರಕ ಕೋರ್ಸ್ ಆರಂಭಿಸಲಿದ್ದೇವೆ’ ಎಂದರು.</p>.<p>‘ವಿದ್ಯಾರ್ಥಿಗಳಿಗೆ ಶುಲ್ಕ ವಿಧಿಸುತ್ತೇವೆ. ಶುಲ್ಕ ಪಾವತಿಸಲು ಸಾಧ್ಯವಾಗದವರಿಗೆ ವಿದ್ಯಾರ್ಥಿವೇತನಕ್ಕೆ ವ್ಯವಸ್ಥೆ ಮಾಡುತ್ತೇವೆ. ಮಠದ ನೆರವಿನಿಂದ ನಡೆಯುವ ಈ ವಿದ್ಯಾಪೀಠ ನಿರ್ವಹಣೆಗೆ ಭಕ್ತರೂ ಕೈಜೋಡಿಸಲಿದ್ದಾರೆ. ಈ ಯೋಜನೆಗೆ ಸರ್ಕಾರದಿಂದ ನಯಾಪೈಸೆಯನ್ನೂ ಕೇಳುವುದಿಲ್ಲ ಎಂದು ಸಂಕಲ್ಪ ಮಾಡಿದ್ದೇವೆ’ ಎಂದು ಸ್ಪಷ್ಟಪಡಿಸಿದರು.</p>.<p>***</p>.<p>ಭಾರತೀಯ ವಿದ್ಯೆಗಳನ್ನು ಕಲಿತವರಿಗೆ ಉದ್ಯೋಗದ ಕೊರತೆ ಎದುರಾಗದು. ಭಾರತೀಯ ವಿದ್ಯೆಯಲ್ಲಿ ಈಗಲೂ ಸತ್ವವೂ ಇದೆ, ಅದನ್ನು ಅಧ್ಯಯನ ಮಾಡಿದವರಿಗೆ ಬೇಡಿಕೆಯೂ ಇದೆ.<br /><strong>-ರಾಘವೇಶ್ವರಭಾರತೀ ಸ್ವಾಮೀಜಿ, ರಾಮಚಂದ್ರಾಪುರ ಮಠ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>