ವಿಷ್ಣುವರ್ಧನ್ ಅವರ 68ನೇ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣು ಸಮಾಧಿಗೆ ಭೇಟಿ ನೀಡಿ ಮಾತನಾಡಿದ ಅವರು, ‘ನಾಡಿನ ಬಹುತೇಕ ರಾಜಕಾರಣಿಗಳು ಭೂ ನುಂಗಣ್ಣರೇ ಆಗಿದ್ದಾರೆ. ವಿಷ್ಣು ಸ್ಮಾರಕ್ಕೆ ಮಾತ್ರ ಸ್ಥಳ ದೊರಕಿಸಿಕೊಡಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ವಿಷ್ಣು ಅವರು ನಿಧನರಾಗಿ 9 ವರ್ಷಗಳೇ ಕಳೆದರೂ ಈವರೆಗೂ ಸ್ಮಾರಕ ನಿರ್ಮಾಣಕ್ಕೆ ಕನಿಷ್ಠ ರೂಪು ರೇಷೆಗಳನ್ನು ರೂಪಿಸದೆ ಇರುವುದು ನಾಚಿಕೆಗೇಡಿನ ಸಂಗತಿ’ ಎಂದು ಹರಿಹಾಯ್ದರು.