<p><strong>ಬೆಂಗಳೂರು:</strong> ಅಭಿಮಾನ್ ಸ್ಟುಡಿಯೊದ ಆವರಣದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿ ತೆರವು ವಿಚಾರದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಮೌನ ವಹಿಸಿರುವ ಕ್ರಮವನ್ನು ಖಂಡಿಸಿ ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮಂಡಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಸಮಾಧಿಯನ್ನು ಏಕಾಏಕಿ ತೆರವು ಮಾಡಿರುವುದು ಅಭಿಮಾನಿಗಳಿಗೆ ನೋವು ಉಂಟು ಮಾಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಅವರು ಮೌನ ವಹಿಸಿರುವುದು, ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಮಾಡದೇ ಇರುವುದು ಖಂಡನೀಯ ಎಂದು ವಿಷ್ಣುವರ್ಧನ್ ಅಭಿಮಾನಿ ಕ್ರಾಂತಿರಾಜು ದೂರಿದರು.</p>.<p>ವಿಷ್ಣುವರ್ಧನ್ ಅಭಿಮಾನಿಗಳನ್ನು ನಿರ್ಮಾಪಕ ಸಾ.ರಾ.ಗೋವಿಂದ ಅವರು ಸಮಾಧಾನ ಪಡಿಸಿದರು. ಸರ್ಕಾರದ ಜೊತೆಯಲ್ಲಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.</p>.<p>ವಿಷ್ಣುವರ್ಧನ್ ಬದುಕಿದ್ದಾಗ ನೂರಾರು ತೊಂದರೆ ಅನುಭವಿಸಿದ್ದರು. ಅವರು ಮೃತಪಟ್ಟ ಮೇಲೂ ಸಮಾಧಿ ತೆರವು ಮಾಡಿ ಅಭಿಮಾನಿಗಳಿಗೆ ನೋವು ಮಾಡಿದ್ದಾರೆ ಎಂದು ವೆಂಕಟೇಶ್ಗೌಡ, ಶ್ರೀನಿವಾಸ್ ಗೌಡ ಹೇಳಿದರು. </p>.<p>ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಸರ್ಕಾರ ವಶಪಡಿಸಿಕೊಂಡು, ಬಾಲಕೃಷ್ಣ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ. ಇನ್ನೂ ಕಾಲ ಮಿಂಚಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಭಿಮಾನ್ ಸ್ಟುಡಿಯೊದ ಆವರಣದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿ ತೆರವು ವಿಚಾರದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿ ಮೌನ ವಹಿಸಿರುವ ಕ್ರಮವನ್ನು ಖಂಡಿಸಿ ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮಂಡಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಸಮಾಧಿಯನ್ನು ಏಕಾಏಕಿ ತೆರವು ಮಾಡಿರುವುದು ಅಭಿಮಾನಿಗಳಿಗೆ ನೋವು ಉಂಟು ಮಾಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು ಅವರು ಮೌನ ವಹಿಸಿರುವುದು, ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಮಾಡದೇ ಇರುವುದು ಖಂಡನೀಯ ಎಂದು ವಿಷ್ಣುವರ್ಧನ್ ಅಭಿಮಾನಿ ಕ್ರಾಂತಿರಾಜು ದೂರಿದರು.</p>.<p>ವಿಷ್ಣುವರ್ಧನ್ ಅಭಿಮಾನಿಗಳನ್ನು ನಿರ್ಮಾಪಕ ಸಾ.ರಾ.ಗೋವಿಂದ ಅವರು ಸಮಾಧಾನ ಪಡಿಸಿದರು. ಸರ್ಕಾರದ ಜೊತೆಯಲ್ಲಿ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.</p>.<p>ವಿಷ್ಣುವರ್ಧನ್ ಬದುಕಿದ್ದಾಗ ನೂರಾರು ತೊಂದರೆ ಅನುಭವಿಸಿದ್ದರು. ಅವರು ಮೃತಪಟ್ಟ ಮೇಲೂ ಸಮಾಧಿ ತೆರವು ಮಾಡಿ ಅಭಿಮಾನಿಗಳಿಗೆ ನೋವು ಮಾಡಿದ್ದಾರೆ ಎಂದು ವೆಂಕಟೇಶ್ಗೌಡ, ಶ್ರೀನಿವಾಸ್ ಗೌಡ ಹೇಳಿದರು. </p>.<p>ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಸರ್ಕಾರ ವಶಪಡಿಸಿಕೊಂಡು, ಬಾಲಕೃಷ್ಣ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ. ಇನ್ನೂ ಕಾಲ ಮಿಂಚಿಲ್ಲ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>