<p><strong>ಬೆಂಗಳೂರು:</strong> ನಗರದ ಅರಮನೆ ಮೈದಾನದಲ್ಲಿ ಡಿ.27ರಿಂದ 29ರವರೆಗೆ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಉದ್ಘಾಟನೆಗಾಗಿ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಅಹಿಚ್ಛತ್ರದಿಂದ ಬುಧವಾರ ಜ್ಯೋತಿ ಹೊರಟಿದೆ.</p>.<p>2,300 ಕಿ.ಮೀ. ದೂರದ ಅಹಿಚ್ಛತ್ರದ ಗ್ರಾಮದಲ್ಲಿರುವ ರಾಮ ದೇವಾಲಯದಿಂದ 'ಅಹಿಚ್ಛತ್ರ ಜ್ಯೋತಿ'ಗೆ ಚಾಲನೆ ನೀಡಲಾಯಿತು. ಈ ದೇವಸ್ಥಾನದಲ್ಲಿ 50 ವರ್ಷಗಳಿಂದ ಅಖಂಡ ಜ್ಯೋತಿಯು ಬೆಳಗುತ್ತಿದ್ದು, ಆ ಜ್ಯೋತಿಯಿಂದ ಇನ್ನೊಂದು ಜ್ಯೋತಿಯನ್ನು ಬೆಳಗಿ, ಯಾತ್ರೆಗೆ ಶ್ರೀಕಾರ ಹಾಕಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಟ್ರಸ್ಟಿಗಳು, ಉತ್ತರ ಪ್ರದೇಶ ವ್ಯಾಪಾರ ಮಂಡಳಿಯ ಅಧ್ಯಕ್ಷರು ಹಾಗೂ ಗ್ರಾಮದ ಪ್ರಮುಖರು ಅಹಿಚ್ಛತ್ರ ಜ್ಯೋತಿಗೆ ಶುಭ ಹಾರೈಸಿದರು.</p>.<p>ಉತ್ತರಕನ್ನಡದ ಹೈಗುಂದದಲ್ಲಿರುವ ದುರ್ಗಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ ವಿ.ಡಿ ಭಟ್ ಮತ್ತು ತಂಡದವರು ಹೈಗುಂದದಿಂದ ಉತ್ತರ ಪ್ರದೇಶದ ಅಹಿಚ್ಛತ್ರಕ್ಕೆ ಯಾತ್ರೆ ನಡೆಸಿದರು. ಅಲ್ಲಿಂದ ಅಖಂಡ ಜ್ಯೋತಿಯನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಅರಮನೆ ಮೈದಾನದಲ್ಲಿ ಡಿ.27ರಿಂದ 29ರವರೆಗೆ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಉದ್ಘಾಟನೆಗಾಗಿ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಅಹಿಚ್ಛತ್ರದಿಂದ ಬುಧವಾರ ಜ್ಯೋತಿ ಹೊರಟಿದೆ.</p>.<p>2,300 ಕಿ.ಮೀ. ದೂರದ ಅಹಿಚ್ಛತ್ರದ ಗ್ರಾಮದಲ್ಲಿರುವ ರಾಮ ದೇವಾಲಯದಿಂದ 'ಅಹಿಚ್ಛತ್ರ ಜ್ಯೋತಿ'ಗೆ ಚಾಲನೆ ನೀಡಲಾಯಿತು. ಈ ದೇವಸ್ಥಾನದಲ್ಲಿ 50 ವರ್ಷಗಳಿಂದ ಅಖಂಡ ಜ್ಯೋತಿಯು ಬೆಳಗುತ್ತಿದ್ದು, ಆ ಜ್ಯೋತಿಯಿಂದ ಇನ್ನೊಂದು ಜ್ಯೋತಿಯನ್ನು ಬೆಳಗಿ, ಯಾತ್ರೆಗೆ ಶ್ರೀಕಾರ ಹಾಕಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಟ್ರಸ್ಟಿಗಳು, ಉತ್ತರ ಪ್ರದೇಶ ವ್ಯಾಪಾರ ಮಂಡಳಿಯ ಅಧ್ಯಕ್ಷರು ಹಾಗೂ ಗ್ರಾಮದ ಪ್ರಮುಖರು ಅಹಿಚ್ಛತ್ರ ಜ್ಯೋತಿಗೆ ಶುಭ ಹಾರೈಸಿದರು.</p>.<p>ಉತ್ತರಕನ್ನಡದ ಹೈಗುಂದದಲ್ಲಿರುವ ದುರ್ಗಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದ ವಿ.ಡಿ ಭಟ್ ಮತ್ತು ತಂಡದವರು ಹೈಗುಂದದಿಂದ ಉತ್ತರ ಪ್ರದೇಶದ ಅಹಿಚ್ಛತ್ರಕ್ಕೆ ಯಾತ್ರೆ ನಡೆಸಿದರು. ಅಲ್ಲಿಂದ ಅಖಂಡ ಜ್ಯೋತಿಯನ್ನು ಬೆಂಗಳೂರಿಗೆ ಕರೆತರುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>