‘ಮಂದಿರ ನಿರ್ಮಾಣಕ್ಕೆ ದೇಶದಾದ್ಯಂತ ಹಮ್ಮಿಕೊಂಡಿದ್ದ ನಿಧಿ ಸಂಗ್ರಹ ಅಭಿಯಾನದಲ್ಲಿ ₹ 1,500 ಕೋಟಿ ಸಂಗ್ರಹವಾಗುವ ನಿರೀಕ್ಷೆಯನ್ನು ಹೊಂದಿದ್ದೆವು. ಆದರೆ, ಈಗಾಗಲೇ ₹ 2,100 ಕೋಟಿ ಸಂಗ್ರಹವಾಗಿದೆ. ಭಕ್ತಾದಿಗಳು ಸ್ವಯಂಪ್ರೇರಿತರಾಗಿ ಹಣ ನೀಡುತ್ತಿದ್ದಾರೆ. ಹೀಗಾಗಿ ₹ 2,500 ಕೋಟಿ ಸಂಗ್ರಹವಾಗುವ ಸಾಧ್ಯತೆಯಿದೆ. ಈ ಮಂದಿರಕ್ಕೆ ಎಲ್ಲರು ಕೈಲಾದ ಕೊಡುಗೆಯನ್ನು ನೀಡಿದ್ದಾರೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.