<p><strong>ಬೆಂಗಳೂರು</strong>: ‘ವಿಶ್ವಕರ್ಮ, ಅಕ್ಕಸಾಲಿಗರು ಸಂಕಷ್ಟದಲ್ಲಿದ್ದು ಅವರಿಗೆ ನೆರವಾಗುವ ದೃಷ್ಟಿಯಿಂದ ವಿಶೇಷ ಪ್ಯಾಕೇಜ್ ಪ್ರಕಟಿಸಬೇಕು’ ಎಂದು ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಆರ್. ಮಧುಸೂಧನ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಅಗತ್ಯ ಕೌಶಲ ಮತ್ತು ಉಪಕರಣಗಳು ಇದ್ದರೂ ಕಚ್ಚಾ ವಸ್ತುಗಳ ಕೊರತೆಯಿಂದ ಕೆಲಸ ಇಲ್ಲದಂತಾಗಿದೆ. ಬಂಡವಾಳಶಾಹಿಗಳ ಹಾವಳಿಯಿಂದ ಗುಡಿ ಕೈಗಾರಿಗಳು ತೀವ್ರ ನಷ್ಟ ಅನುಭವಿಸುತ್ತಿವೆ’ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>‘ಅವಕಾಶಗಳ ಕೊರತೆಯಿಂದ ಇಡೀ ಸಮುದಾಯ ಸಂಕಷ್ಟಕ್ಕೆ ಒಳಗಾಗಿದೆ. ಆದ್ದರಿಂದ, ನಿವೇಶನಗಳ ಹಂಚಿಕೆ ಮತ್ತು ಮನೆಗಳನ್ನು ಮಂಜೂರು ಮಾಡಲು ಕ್ರಮಕೈಗೊಳ್ಳಬೇಕು. ಹಣಕಾಸಿನ ನೆರವು ನೀಡುವುದರ ಜೊತೆಗೆ, ಈ ಸಮುದಾಯದ ಜೀವನೋಪಾಯವನ್ನು ಬೆಂಬಲಿಸುವ ಯೋಜನೆಗಳನ್ನು ರೂಪಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಕಚ್ಚಾ ವಸ್ತುಗಳ ಖರೀದಿಗೆ ಸಬ್ಸಿಡಿ ಒದಗಿಸಬೇಕು. ಸಾಂಪ್ರದಾಯಿಕ ಕುಶಲಕರ್ಮಿಗಳ ಗುರುತಿಸುವಿಕೆ, ರಕ್ಷಣೆ ಮತ್ತು ಪುನರುಜ್ಜೀವನಕ್ಕೆ ನೆರವು ನೀಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿಶ್ವಕರ್ಮ, ಅಕ್ಕಸಾಲಿಗರು ಸಂಕಷ್ಟದಲ್ಲಿದ್ದು ಅವರಿಗೆ ನೆರವಾಗುವ ದೃಷ್ಟಿಯಿಂದ ವಿಶೇಷ ಪ್ಯಾಕೇಜ್ ಪ್ರಕಟಿಸಬೇಕು’ ಎಂದು ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಆರ್. ಮಧುಸೂಧನ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<p>ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಅಗತ್ಯ ಕೌಶಲ ಮತ್ತು ಉಪಕರಣಗಳು ಇದ್ದರೂ ಕಚ್ಚಾ ವಸ್ತುಗಳ ಕೊರತೆಯಿಂದ ಕೆಲಸ ಇಲ್ಲದಂತಾಗಿದೆ. ಬಂಡವಾಳಶಾಹಿಗಳ ಹಾವಳಿಯಿಂದ ಗುಡಿ ಕೈಗಾರಿಗಳು ತೀವ್ರ ನಷ್ಟ ಅನುಭವಿಸುತ್ತಿವೆ’ ಎಂದು ಅಳಲು ತೋಡಿಕೊಂಡಿದ್ದಾರೆ.</p>.<p>‘ಅವಕಾಶಗಳ ಕೊರತೆಯಿಂದ ಇಡೀ ಸಮುದಾಯ ಸಂಕಷ್ಟಕ್ಕೆ ಒಳಗಾಗಿದೆ. ಆದ್ದರಿಂದ, ನಿವೇಶನಗಳ ಹಂಚಿಕೆ ಮತ್ತು ಮನೆಗಳನ್ನು ಮಂಜೂರು ಮಾಡಲು ಕ್ರಮಕೈಗೊಳ್ಳಬೇಕು. ಹಣಕಾಸಿನ ನೆರವು ನೀಡುವುದರ ಜೊತೆಗೆ, ಈ ಸಮುದಾಯದ ಜೀವನೋಪಾಯವನ್ನು ಬೆಂಬಲಿಸುವ ಯೋಜನೆಗಳನ್ನು ರೂಪಿಸಬೇಕು’ ಎಂದು ಆಗ್ರಹಿಸಿದ್ದಾರೆ.</p>.<p>‘ಕಚ್ಚಾ ವಸ್ತುಗಳ ಖರೀದಿಗೆ ಸಬ್ಸಿಡಿ ಒದಗಿಸಬೇಕು. ಸಾಂಪ್ರದಾಯಿಕ ಕುಶಲಕರ್ಮಿಗಳ ಗುರುತಿಸುವಿಕೆ, ರಕ್ಷಣೆ ಮತ್ತು ಪುನರುಜ್ಜೀವನಕ್ಕೆ ನೆರವು ನೀಡಬೇಕು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>