<p><strong>ಬೆಂಗಳೂರು:</strong> ಗೋವಾ ಮತ್ತು ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ಕಾರ್ಮಿಕರ ರಕ್ಷಣೆಗೆ ಶೀಘ್ರದಲ್ಲೇ ಹೊಸ ಯೋಜನೆ ರೂಪಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದರು.</p>.<p>ಕಾರ್ಮಿಕ ಇಲಾಖೆಯು ಕೆಲಸದ ಸ್ಥಳವನ್ನು ಅಪಘಾತ ಮುಕ್ತವಾಗಿಸುವ ವಿಷಯವಾಗಿ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಕಟ್ಟಡ ಕಾರ್ಮಿಕ ವಲಯವನ್ನು ಅಪಘಾತ ಮುಕ್ತ ವಲಯವನ್ನಾಗಿ ಮಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<p>‘ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ದೊಡ್ಡದಿದೆ. ಅವರ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ. ಕಾರ್ಮಿಕರಿಗೆ ಕೆಲಸದ ಬಗ್ಗೆ ಬದ್ಧತೆ ಇದ್ದಾಗ ಮಾತ್ರ ಅವರ ಹೋರಾಟಕ್ಕೆ ಅರ್ಥ ಬರುತ್ತದೆ’ ಎಂದರು.</p>.<p>‘ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸುವ ಅವಘಡಗಳಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಬೇಕು ಎಂಬ ನಿಯಮವಿದೆ. ಬಹಳಷ್ಟು ಪ್ರಕರಣಗಳಲ್ಲಿ ಇದು ಕಾರ್ಯರೂಪಕ್ಕೆ ಬರುತ್ತಿಲ್ಲ. ಪರಿಹಾರ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಕಾರ್ಮಿಕ ಮುಖಂಡರು ಒತ್ತಾಯಿಸಿದರು.</p>.<p>‘ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವರು ಭರವಸೆ ನೀಡಿದರು.</p>.<p>ಸಮ್ಮೇಳನದಲ್ಲಿ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್, ರಾಜ್ಯ ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿ ಕಾರ್ಯದರ್ಶಿ ಜೋತ್ಸ್ನಾ ರೆಡ್ಡಿ, ಕಾರ್ಮಿಕ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ಜಿ.ಮಂಜುನಾಥ್, ಬಿ.ಕೆ.ಸಾಹು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಗೋವಾ ಮತ್ತು ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಲ್ಲಿ ಕೆಲಸ ಮಾಡುತ್ತಿರುವ ಕರ್ನಾಟಕದ ಕಾರ್ಮಿಕರ ರಕ್ಷಣೆಗೆ ಶೀಘ್ರದಲ್ಲೇ ಹೊಸ ಯೋಜನೆ ರೂಪಿಸಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದರು.</p>.<p>ಕಾರ್ಮಿಕ ಇಲಾಖೆಯು ಕೆಲಸದ ಸ್ಥಳವನ್ನು ಅಪಘಾತ ಮುಕ್ತವಾಗಿಸುವ ವಿಷಯವಾಗಿ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾವೇಶದಲ್ಲಿ ಅವರು ಮಾತನಾಡಿದರು. ‘ಕಟ್ಟಡ ಕಾರ್ಮಿಕ ವಲಯವನ್ನು ಅಪಘಾತ ಮುಕ್ತ ವಲಯವನ್ನಾಗಿ ಮಾಡಲು ಎಲ್ಲ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು.</p>.<p>‘ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಪಾತ್ರ ದೊಡ್ಡದಿದೆ. ಅವರ ರಕ್ಷಣೆಗೆ ಆದ್ಯತೆ ನೀಡಬೇಕಾಗಿದೆ. ಕಾರ್ಮಿಕರಿಗೆ ಕೆಲಸದ ಬಗ್ಗೆ ಬದ್ಧತೆ ಇದ್ದಾಗ ಮಾತ್ರ ಅವರ ಹೋರಾಟಕ್ಕೆ ಅರ್ಥ ಬರುತ್ತದೆ’ ಎಂದರು.</p>.<p>‘ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸುವ ಅವಘಡಗಳಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಬೇಕು ಎಂಬ ನಿಯಮವಿದೆ. ಬಹಳಷ್ಟು ಪ್ರಕರಣಗಳಲ್ಲಿ ಇದು ಕಾರ್ಯರೂಪಕ್ಕೆ ಬರುತ್ತಿಲ್ಲ. ಪರಿಹಾರ ಕಲ್ಪಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಕಾರ್ಮಿಕ ಮುಖಂಡರು ಒತ್ತಾಯಿಸಿದರು.</p>.<p>‘ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು’ ಎಂದು ಸಚಿವರು ಭರವಸೆ ನೀಡಿದರು.</p>.<p>ಸಮ್ಮೇಳನದಲ್ಲಿ ಕಾರ್ಮಿಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್, ರಾಜ್ಯ ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿ ಕಾರ್ಯದರ್ಶಿ ಜೋತ್ಸ್ನಾ ರೆಡ್ಡಿ, ಕಾರ್ಮಿಕ ಇಲಾಖೆ ಹೆಚ್ಚುವರಿ ಆಯುಕ್ತ ಡಾ.ಜಿ.ಮಂಜುನಾಥ್, ಬಿ.ಕೆ.ಸಾಹು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>