ಮಂಗಳವಾರ, ಮಾರ್ಚ್ 28, 2023
33 °C

ವಿಟಿಯು ಕುಲಪತಿ ನೇಮಕಾತಿ: ಡಿ.2ಕ್ಕೆ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಎಸ್.ವಿದ್ಯಾಶಂಕರ್ ನೇಮಕಾತಿಯ ಸಿಂಧುತ್ವ ಪ್ರಶ್ನಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಹೈಕೋರ್ಟ್ ಡಿಸೆಂಬರ್ 2ರಂದು ವಿಚಾರಣೆ ನಡೆಸಲಿದೆ.

ಈ ಸಂಬಂಧ ಮೈಸೂರು ವಿವಿಯ ಮಾಜಿ ಹಂಗಾಮಿ ಕುಲಪತಿ ಪ್ರೊ. ಬಿ.ಶಿವರಾಜ್ ಪಿಐಎಲ್‌ ಸಲ್ಲಿಸಿದ್ದು, ‘ವಿದ್ಯಾಶಂಕರ್ ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿಯಾಗಿದ್ದ ಅವಧಿಯಲ್ಲಿ ಹಲವು ಅಕ್ರಮಗಳನ್ನು ಎಸಗಿದ್ದಾರೆ. ಅವರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳು ವಿಚಾರಣೆಗೆ ಬಾಕಿ ಇವೆ’ ಎಂದು ಆರೋಪಿಸಿದ್ದಾರೆ. ‘ವಿಟಿಯು ಕುಲಪತಿ ನೇಮಕದ ಶೋಧನಾ ಸಮಿತಿ ರಚನೆಯೇ ಅಕ್ರಮ. ನಿಯಮಾನುಸಾರ ಸಮಿತಿಯಲ್ಲಿ ಯುಜಿಸಿ ಪ್ರತಿನಿಧಿ ನಾಮನಿರ್ದೇಶನ ಮಾಡಿಲ್ಲ’ ಎಂದು ವಿವರಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು