<p><strong>ಬೆಂಗಳೂರು:</strong> ನಗರದ ದೇವನಹಳ್ಳಿ ಬಳಿಯ ರೆಸಾರ್ಟ್ವೊಂದರಲ್ಲಿ ವಾಸ್ತವ್ಯ ಹೂಡಿದ್ದ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಸೋಮವಾರ ತಮಿಳುನಾಡು ತಲುಪಿದ್ದಾರೆ.</p>.<p>ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಅವರು, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಅಲ್ಲಿಂದ ಬಿಡುಗಡೆಯಾಗಿ ವಿಶ್ರಾಂತಿ ಪಡೆಯಲು ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದರು.</p>.<p>ಶಶಿಕಲಾ ಸ್ವಾಗತಿಸಲು ಸೋಮವಾರ ಬೆಳಿಗ್ಗೆ ರೆಸಾರ್ಟ್ ಎದುರು ಎಐಎಡಿಎಂಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬೆಂಬಲಿಗರ 200ಕ್ಕೂ ಹೆಚ್ಚು ಕಾರುಗಳಿದ್ದವು. ಶಶಿಕಲಾ ರೆಸಾರ್ಟ್ನಿಂದ ಹೊರಬಂದು ತಮ್ಮ ಕಾರು ಏರಿ ಹೊರಟರು.</p>.<p>ದೇವನಹಳ್ಳಿ, ಯಲಹಂಕ, ಹೆಬ್ಬಾಳ, ಟಿನ್ ಫ್ಯಾಕ್ಟರಿ, ಸಿಲ್ಕ್ ಬೋರ್ಡ್ ಜಂಕ್ಷನ್, ಹೊಸೂರು ರಸ್ತೆ, ಅತ್ತಿಬಲೆ ಗಡಿ ಮೂಲಕ ಶಶಿಕಲಾ ಕಾರು ತಮಿಳುನಾಡಿಗೆ ಹೋಯಿತು. ಮುಖಂಡರು ಹಾಗೂ ಕಾರ್ಯಕರ್ತರು, ಶಶಿಕಲಾ ಕಾರು ಹಿಂಬಾಲಿಸಿದರು. ಈ ಮಾರ್ಗದಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಗಿ, ಸಾರ್ವಜನಿಕರ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>ರಾಜ್ಯದ ಗಡಿಯವರೆಗೂ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪೊಲೀಸರು, ಶಶಿಕಲಾ ಕಾರಿಗೆ ಭದ್ರತೆ ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ದೇವನಹಳ್ಳಿ ಬಳಿಯ ರೆಸಾರ್ಟ್ವೊಂದರಲ್ಲಿ ವಾಸ್ತವ್ಯ ಹೂಡಿದ್ದ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಸೋಮವಾರ ತಮಿಳುನಾಡು ತಲುಪಿದ್ದಾರೆ.</p>.<p>ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಅವರು, ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಅಲ್ಲಿಂದ ಬಿಡುಗಡೆಯಾಗಿ ವಿಶ್ರಾಂತಿ ಪಡೆಯಲು ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದರು.</p>.<p>ಶಶಿಕಲಾ ಸ್ವಾಗತಿಸಲು ಸೋಮವಾರ ಬೆಳಿಗ್ಗೆ ರೆಸಾರ್ಟ್ ಎದುರು ಎಐಎಡಿಎಂಕೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬೆಂಬಲಿಗರ 200ಕ್ಕೂ ಹೆಚ್ಚು ಕಾರುಗಳಿದ್ದವು. ಶಶಿಕಲಾ ರೆಸಾರ್ಟ್ನಿಂದ ಹೊರಬಂದು ತಮ್ಮ ಕಾರು ಏರಿ ಹೊರಟರು.</p>.<p>ದೇವನಹಳ್ಳಿ, ಯಲಹಂಕ, ಹೆಬ್ಬಾಳ, ಟಿನ್ ಫ್ಯಾಕ್ಟರಿ, ಸಿಲ್ಕ್ ಬೋರ್ಡ್ ಜಂಕ್ಷನ್, ಹೊಸೂರು ರಸ್ತೆ, ಅತ್ತಿಬಲೆ ಗಡಿ ಮೂಲಕ ಶಶಿಕಲಾ ಕಾರು ತಮಿಳುನಾಡಿಗೆ ಹೋಯಿತು. ಮುಖಂಡರು ಹಾಗೂ ಕಾರ್ಯಕರ್ತರು, ಶಶಿಕಲಾ ಕಾರು ಹಿಂಬಾಲಿಸಿದರು. ಈ ಮಾರ್ಗದಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಗಿ, ಸಾರ್ವಜನಿಕರ ವಾಹನಗಳು ಸಾಲುಗಟ್ಟಿ ನಿಂತಿದ್ದವು.</p>.<p>ರಾಜ್ಯದ ಗಡಿಯವರೆಗೂ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪೊಲೀಸರು, ಶಶಿಕಲಾ ಕಾರಿಗೆ ಭದ್ರತೆ ಒದಗಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>