ಬೆಂಗಳೂರು: 'ಅವಿಭಕ್ತ ಕುಟುಂಬಗಳ ಸಂಖ್ಯೆ ಕುಸಿಯುತ್ತಿರುವುದು ಸಮಾಜದ ಹಿತದೃಷ್ಟಿಯಿಂದ ಅನಾರೋಗ್ಯಕರ ಸಂಗತಿ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಳವಳ ವ್ಯಕ್ತಪಡಿಸಿದರು.
ಬನ್ನೇರುಘಟ್ಟ ಸಮೀಪದ ನಿಸರ್ಗ ಬಡಾವಣೆಯಲ್ಲಿ ನಡೆದ ವಿಎಲ್ಎನ್ ನವನಿರ್ಮಾಣ್ ಪ್ರಬುದ್ಧಾಲಯದ 14ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಐವರು ಹಿರಿಯ ನಾಗರಿಕರಿಗೆ ‘ವಿಎಲ್ಎನ್ ಹಿರಿಯ ನಾಗರಿಕರ ಜೀವಮಾನದ ಸಾಧನೆ ಪ್ರಶಸ್ತಿ’ ಪ್ರದಾನ ಮಾಡಿ ಅವರು ಮಾತನಾಡಿದರು.
ವಾರ್ಷಿಕೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಯಿತು.