<p><strong>ಬೆಂಗಳೂರು</strong>: ‘ಇಲ್ಲಿಂದ ಆಯ್ಕೆಯಾಗಿ ದೆಹಲಿಗೆ ಹೋದ ಬಿಜೆಪಿಯವರು ಕಾಲ ಹರಣ ಮಾಡಿ ಜನರನ್ನು ವಂಚಿಸಿದರೇ ಹೊರತು ಜನರ ಬವಣೆಗಳ ಕುರಿತು ಯಾವುದೇ ಆಸಕ್ತಿ ಇರಲಿಲ್ಲ. ನಾನು ಲೋಕಸಭೆಗೆ ಆಯ್ಕೆಯಾದರೆ ಜನರಧ್ವನಿಯಾಗಿ ಕೆಲಸ ಮಾಡುವೆ’ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ತಿಳಿಸಿದರು.</p>.<p>ಲೋಕಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಗುರುವಾರ ವಿವಿಧೆಡೆ ಮನೆ ಮನೆಗೆ ತೆರಳಿ ಮತ ಯಾಚಿಸಿದರು. ಮತದಾರರೊಂದಿಗೆ ಚರ್ಚಿಸಿದರು. ’ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಇಲ್ಲಿಂದ ಆಯ್ಕೆಯಾಗಿರುವವರು ರಾಜ್ಯಕ್ಕಾಗಿರುವ ಮೋಸದ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ‘ ಎಂದು ವಿವರಿಸಿದರು.</p>.<p>‘ದೇಶದ ವಿವಿಧ ರಾಜ್ಯಗಳಲ್ಲಿ ಕುದುರೆ ವ್ಯಾಪಾರದ ಮೂಲಕ ಜನಪ್ರತಿನಿಧಿಗಳನ್ನು ಖರೀದಿಸಿ, ಜನಪರ ಸರ್ಕಾರಗಳನ್ನು ಬೀಳಿಸುತ್ತಿರುವ ಬಿಜೆಪಿಯ ನಾಯಕರು ಸರ್ವಾಧಿಕಾರದ ಕನಸು ಕಾಣುತ್ತಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ನನ್ನನ್ನು ಗೆಲ್ಲಿಸಿ’ ಎಂದು ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಇಲ್ಲಿಂದ ಆಯ್ಕೆಯಾಗಿ ದೆಹಲಿಗೆ ಹೋದ ಬಿಜೆಪಿಯವರು ಕಾಲ ಹರಣ ಮಾಡಿ ಜನರನ್ನು ವಂಚಿಸಿದರೇ ಹೊರತು ಜನರ ಬವಣೆಗಳ ಕುರಿತು ಯಾವುದೇ ಆಸಕ್ತಿ ಇರಲಿಲ್ಲ. ನಾನು ಲೋಕಸಭೆಗೆ ಆಯ್ಕೆಯಾದರೆ ಜನರಧ್ವನಿಯಾಗಿ ಕೆಲಸ ಮಾಡುವೆ’ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ ತಿಳಿಸಿದರು.</p>.<p>ಲೋಕಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಗುರುವಾರ ವಿವಿಧೆಡೆ ಮನೆ ಮನೆಗೆ ತೆರಳಿ ಮತ ಯಾಚಿಸಿದರು. ಮತದಾರರೊಂದಿಗೆ ಚರ್ಚಿಸಿದರು. ’ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಇಲ್ಲಿಂದ ಆಯ್ಕೆಯಾಗಿರುವವರು ರಾಜ್ಯಕ್ಕಾಗಿರುವ ಮೋಸದ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ‘ ಎಂದು ವಿವರಿಸಿದರು.</p>.<p>‘ದೇಶದ ವಿವಿಧ ರಾಜ್ಯಗಳಲ್ಲಿ ಕುದುರೆ ವ್ಯಾಪಾರದ ಮೂಲಕ ಜನಪ್ರತಿನಿಧಿಗಳನ್ನು ಖರೀದಿಸಿ, ಜನಪರ ಸರ್ಕಾರಗಳನ್ನು ಬೀಳಿಸುತ್ತಿರುವ ಬಿಜೆಪಿಯ ನಾಯಕರು ಸರ್ವಾಧಿಕಾರದ ಕನಸು ಕಾಣುತ್ತಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ನನ್ನನ್ನು ಗೆಲ್ಲಿಸಿ’ ಎಂದು ಮನವಿ ಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>