ಎಎಪಿ ಬೆಂಗಳೂರು ನಗರ ಘಟಕದ ಉಪಾಧ್ಯಕ್ಷ ಬಿ.ಟಿ.ನಾಗಣ್ಣ, ‘ಮತದಾರರ ಪಟ್ಟಿಯಲ್ಲಿನ ಅಕ್ರಮದ ಬಗ್ಗೆ ಸಾಕ್ಷಿ ಸಮೇತ ದೂರು ನೀಡಿದ್ದರೂ, ಈವರೆಗೆ ಯಾವುದೇ ಕ್ರಮ ಜರುಗಿಲ್ಲ. ಚುನಾವಣೆಯಲ್ಲಿ ಭ್ರಷ್ಟ ಅಭ್ಯರ್ಥಿಗಳು ಗೆದ್ದರೆ, ಮುಂದಿನ ದಿನಗಳಲ್ಲಿ ಸಂಘದ ಆಸ್ತಿ ಪಾಸ್ತಿಗಳಿಗೆ ಧಕ್ಕೆಯಾಗುವ ಸಂಭವವಿದೆ. ಹಾಗಾಗಿ, ಚುನಾವಣೆ ರದ್ದುಪಡಿಸಬೇಕು’ ಎಂದು ಹೇಳಿದರು.