<p><strong>ಬೆಂಗಳೂರು</strong>: ಫರ್ಸ್ಟ್ ಸರ್ಕಲ್ ಸೊಸೈಟಿಯು ಇದೇ 19ರಿಂದ 21ರವರೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ‘ಉದ್ಯಮಿ ಒಕ್ಕಲಿಗ’ ಸಮಾವೇಶ ಹಮ್ಮಿಕೊಂಡಿದೆ. </p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸೊಸೈಟಿ ಅಧ್ಯಕ್ಷ ನಂದೀಶ ರಾಜೇಗೌಡ, ‘19ರಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶ ಉದ್ಘಾಟಿಸಲಿದ್ದು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ’ ಎಂದರು.</p>.<p>‘ನೂತನ ಜಾಲತಾಣವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೋಕಾರ್ಪಣೆ ಮಾಡಲಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು. </p>.<p>‘ಸಮಾವೇಶದಲ್ಲಿ ನೂರಕ್ಕೂ ಅಧಿಕ ಒಕ್ಕಲಿಗ ಉದ್ಯಮಿಗಳ ಮಳಿಗೆಗಳು ಇರಲಿವೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ ಸೇರಿ ವಿವಿಧ ಕ್ಷೇತ್ರಗಳ ಬಗ್ಗೆ ಚಿಂತನ– ಮಂಥನ ನಡೆಯಲಿದೆ. ಈ ಬಾರಿ ಒಕ್ಕಲಿಗರ ಆಹಾರ ಪದ್ಧತಿ ವಿಶೇಷ ಆಕರ್ಷಣೆಯಾಗಲಿದೆ. ‘ರಾಗಿ ಮುದ್ದೆ ಊಟ’ಕ್ಕೆ ಭೌಗೋಳಿಕ ಸೂಚ್ಯಂಕಕ್ಕೂ (ಜಿಐ ಟ್ಯಾಗ್) ಸಮಾವೇಶದಲ್ಲಿ ಒತ್ತಾಯಿಸಲಾಗುವುದು. 19ರ ಸಂಜೆ ‘ದೇವಿ ಮಹಾತ್ಮೆ’ ಮೂಡಲಪಾಯ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು. </p>.<p>‘ತಮಿಳುನಾಡಿನಿಂದಲೂ ಒಕ್ಕಲಿಗ ಉದ್ಯಮಿಗಳು ಬರಲಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ಒಕ್ಕಲಿಗ ಉದ್ಯಮಿಗಳ ಸಮನ್ವಯಕ್ಕಾಗಿ ಪ್ರತ್ಯೇಕ ಚರ್ಚೆ ಹಮ್ಮಿಕೊಳ್ಳಲಾಗುತ್ತದೆ. ಮೂರು ದಿನಗಳ ಸಮಾವೇಶದಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಗಂಗವಾಡಿ ರಾಜವಂಶದ ಲಾಂಛನವನ್ನು ಸಮಾವೇಶದ ಆಕರ್ಷಣೆಯಾಗಿ ಬಳಸಿಕೊಳ್ಳಲಾಗುತ್ತದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಫರ್ಸ್ಟ್ ಸರ್ಕಲ್ ಸೊಸೈಟಿಯು ಇದೇ 19ರಿಂದ 21ರವರೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ‘ಉದ್ಯಮಿ ಒಕ್ಕಲಿಗ’ ಸಮಾವೇಶ ಹಮ್ಮಿಕೊಂಡಿದೆ. </p>.<p>ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸೊಸೈಟಿ ಅಧ್ಯಕ್ಷ ನಂದೀಶ ರಾಜೇಗೌಡ, ‘19ರಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾವೇಶ ಉದ್ಘಾಟಿಸಲಿದ್ದು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ’ ಎಂದರು.</p>.<p>‘ನೂತನ ಜಾಲತಾಣವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೋಕಾರ್ಪಣೆ ಮಾಡಲಿದ್ದಾರೆ. ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು. </p>.<p>‘ಸಮಾವೇಶದಲ್ಲಿ ನೂರಕ್ಕೂ ಅಧಿಕ ಒಕ್ಕಲಿಗ ಉದ್ಯಮಿಗಳ ಮಳಿಗೆಗಳು ಇರಲಿವೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ ಸೇರಿ ವಿವಿಧ ಕ್ಷೇತ್ರಗಳ ಬಗ್ಗೆ ಚಿಂತನ– ಮಂಥನ ನಡೆಯಲಿದೆ. ಈ ಬಾರಿ ಒಕ್ಕಲಿಗರ ಆಹಾರ ಪದ್ಧತಿ ವಿಶೇಷ ಆಕರ್ಷಣೆಯಾಗಲಿದೆ. ‘ರಾಗಿ ಮುದ್ದೆ ಊಟ’ಕ್ಕೆ ಭೌಗೋಳಿಕ ಸೂಚ್ಯಂಕಕ್ಕೂ (ಜಿಐ ಟ್ಯಾಗ್) ಸಮಾವೇಶದಲ್ಲಿ ಒತ್ತಾಯಿಸಲಾಗುವುದು. 19ರ ಸಂಜೆ ‘ದೇವಿ ಮಹಾತ್ಮೆ’ ಮೂಡಲಪಾಯ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು. </p>.<p>‘ತಮಿಳುನಾಡಿನಿಂದಲೂ ಒಕ್ಕಲಿಗ ಉದ್ಯಮಿಗಳು ಬರಲಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ಒಕ್ಕಲಿಗ ಉದ್ಯಮಿಗಳ ಸಮನ್ವಯಕ್ಕಾಗಿ ಪ್ರತ್ಯೇಕ ಚರ್ಚೆ ಹಮ್ಮಿಕೊಳ್ಳಲಾಗುತ್ತದೆ. ಮೂರು ದಿನಗಳ ಸಮಾವೇಶದಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಗಂಗವಾಡಿ ರಾಜವಂಶದ ಲಾಂಛನವನ್ನು ಸಮಾವೇಶದ ಆಕರ್ಷಣೆಯಾಗಿ ಬಳಸಿಕೊಳ್ಳಲಾಗುತ್ತದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>