‘ಸಮಾವೇಶದಲ್ಲಿ ನೂರಕ್ಕೂ ಅಧಿಕ ಒಕ್ಕಲಿಗ ಉದ್ಯಮಿಗಳ ಮಳಿಗೆಗಳು ಇರಲಿವೆ. ಶಿಕ್ಷಣ, ಆರೋಗ್ಯ, ಕೈಗಾರಿಕೆ ಸೇರಿ ವಿವಿಧ ಕ್ಷೇತ್ರಗಳ ಬಗ್ಗೆ ಚಿಂತನ– ಮಂಥನ ನಡೆಯಲಿದೆ. ಈ ಬಾರಿ ಒಕ್ಕಲಿಗರ ಆಹಾರ ಪದ್ಧತಿ ವಿಶೇಷ ಆಕರ್ಷಣೆಯಾಗಲಿದೆ. ‘ರಾಗಿ ಮುದ್ದೆ ಊಟ’ಕ್ಕೆ ಭೌಗೋಳಿಕ ಸೂಚ್ಯಂಕಕ್ಕೂ (ಜಿಐ ಟ್ಯಾಗ್) ಸಮಾವೇಶದಲ್ಲಿ ಒತ್ತಾಯಿಸಲಾಗುವುದು. 19ರ ಸಂಜೆ ‘ದೇವಿ ಮಹಾತ್ಮೆ’ ಮೂಡಲಪಾಯ ಯಕ್ಷಗಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.