‘ನೋಟಿಸ್ ಪಡೆದಿದ್ದ ವಿದ್ಯಾರ್ಥಿನಿ, 2018ರ ಅಕ್ಟೋಬರ್ 26ರಂದು ಬಾಕಿ ಶುಲ್ಕ ₹ 70 ಲಕ್ಷವನ್ನು ಚೇರ್ಮನ್ ಕಾಳೇಗೌಡ ಅವರಿಗೆ ನೀಡಿದ್ದರು. ಉಳಿದ ಆರೋಪಿಗಳ ಪರವಾಗಿ ಕಾಳೇಗೌಡ ಹಣ ಪಡೆದಿದ್ದರು. ನಂತರ, ವಿದ್ಯಾರ್ಥಿನಿಯ ಪ್ರವೇಶ ದಾಖಲಾತಿಯನ್ನು ಅಂಗೀಕರಿಸಿದ್ದರು. ಆದರೆ, ವಿದ್ಯಾರ್ಥಿನಿಯಿಂದ ಪಡೆದಿದ್ದ ₹ 70 ಲಕ್ಷವನ್ನು ಆರೋಪಿಗಳು, ಕಾಲೇಜಿಗೆ ಸಂದಾಯ ಮಾಡಿರಲಿಲ್ಲ. ಎಲ್ಲ ಹಣವನ್ನು ಆರೋಪಿಗಳು ತಮ್ಮ ಸ್ವಂತಕ್ಕೆ ಬಳಸಿಕೊಂಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು
ತಿಳಿಸಿವೆ.