ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಿ. ಹನುಮಂತಯ್ಯ, ‘ಕಾಂತರಾಜ ಆಯೋಗ 2015ರಲ್ಲಿ ಸಮೀಕ್ಷೆಗಾಗಿ ತಯಾರಿಸಿದ್ದ 55 ಅಂಶಗಳ ಸ್ವರೂಪ ಅವೈಜ್ಞಾನಿಕವಾಗಿದೆ. ಇದು ಜನಾಂಗವನ್ನು ಒಡೆಯಲು ಮಾಡಿದ ಹುನ್ನಾರ. ಈ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸೋಗಿನಲ್ಲಿ ಜಾತಿ ಗಣತಿ ನಡೆಸಿದೆ. ಅಷ್ಟಕ್ಕೂ ಜಾತಿ ಗಣತಿ ಕೇಂದ್ರ ಸರ್ಕಾರದ ಹಕ್ಕಾಗಿದ್ದು, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ನಡೆಸುವ ಅಧಿಕಾರವಿಲ್ಲ. ಆದ್ದರಿಂದ, ಕಾಂತರಾಜ ಆಯೋಗದ ವರದಿ ಕಾನೂನುಬಾಹಿರ’ ಎಂದರು.