ವಿಶ್ವ ಕನ್ನಡ ಕಲಾ ಕೂಟದ ಅಧ್ಯಕ್ಷ ಹಲ್ಲೇಗೆರೆ ಕೃಷ್ಣ, ‘ಮಂಜುನಾಥ್ ಅವರು, ತಮ್ಮ ಸರಳ ಸೌಮ್ಯ ಸ್ವಭಾವದಿಂದಲೇ ಜನಪ್ರಿಯರಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ಜಯದೇವ ಹೃದ್ರೋಗ ಸಂಸ್ಥೆಯನ್ನು ವಿಶ್ವಮಟ್ಟಕ್ಕೆ ಪರಿಚಯಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಆದ್ದರಿಂದ, ಚುನಾವಣೆಯಲ್ಲಿ ಅವರನ್ನು ಆಯ್ಕೆ ಮಾಡಬೇಕು’ ಎಂದು ಹೇಳಿದರು. ವಿಶ್ವ ಕನ್ನಡ ಕಲಾ ಕೂಟದ ಉಪಾಧ್ಯಕ್ಷ ಸುರೇಶ್ ಬಾಬು ಸುದ್ದಿಗೋಷ್ಠಿಯಲ್ಲಿದ್ದರು.