<p><strong>ಬೆಂಗಳೂರು</strong>: ‘ಮುಂದಿನ ವಿಧಾನಸಭೆ ಚುನಾವಣೆ ಮುಕ್ತ, ನ್ಯಾಯಸಮ್ಮತವಾಗಿ ನಡೆಯಬೇಕಾದರೆ ಮತದಾರರ ದತ್ತಾಂಶ ಕಳವು ಪ್ರಕರಣದ ಸರಿಯಾದ ತನಿಖೆ ಆಗಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಚುನಾವಣಾ ಆಯೋಗದವರು ಈಗ ಪ್ರಕಟಿಸಿರುವ ಮತದಾರ ಪಟ್ಟಿಯನ್ನು ತಡೆಹಿಡಿದು ಪರಿಷ್ಕರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಮತದಾರರ ದತ್ತಾಂಶ ಕಳವು ಪ್ರಕರಣದ ಬಗ್ಗೆ ಚುನಾವಣಾ ಆಯೋ ಗಕ್ಕೆ ನಾವು ದೂರು ಕೊಟ್ಟಿದ್ದೇವೆಂದು ಬಿಜೆಪಿಯವರೂ ದೂರು ಕೊಟ್ಟಿದ್ದಾರೆ. ಅದಕ್ಕೆ ಏನಾ ದರೂ ಅರ್ಥ ಇದೆಯೇ. ಅವರು ಹೀಗೆ ಮಾಡಿದರೆ ಮುಕ್ತ ಚುನಾವಣೆ ಬಗ್ಗೆ ಆತಂಕ ಉಂಟಾಗುವುದಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿಯವರು ಈ ರೀತಿ ಮಾಡುವುದನ್ನು ನೋಡಿದರೆ ಮುಕ್ತ ಚುನಾವಣೆ ನಡೆಯಲಿದೆಯೆ ಅನಿಸುತ್ತದೆಯೇ? ಅಧಿಕಾರದಲ್ಲಿ ಇರುವವರು ಯಾರು? ಮಾತೆತ್ತಿದರೆ ನಿಮ್ಮ ಅವಧಿಯಲ್ಲಿ ಆಗಿರಲಿಲ್ಲವೇ ಎಂದು ಹೇಳುತ್ತಾರೆ. ಪ್ರಕರಣದ ತೀವ್ರತೆ ಗಂಭೀರವಾಗಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಘುವಾಗಿ ಮಾತನಾಡುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮುಂದಿನ ವಿಧಾನಸಭೆ ಚುನಾವಣೆ ಮುಕ್ತ, ನ್ಯಾಯಸಮ್ಮತವಾಗಿ ನಡೆಯಬೇಕಾದರೆ ಮತದಾರರ ದತ್ತಾಂಶ ಕಳವು ಪ್ರಕರಣದ ಸರಿಯಾದ ತನಿಖೆ ಆಗಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದರು.</p>.<p>ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ‘ಚುನಾವಣಾ ಆಯೋಗದವರು ಈಗ ಪ್ರಕಟಿಸಿರುವ ಮತದಾರ ಪಟ್ಟಿಯನ್ನು ತಡೆಹಿಡಿದು ಪರಿಷ್ಕರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಮತದಾರರ ದತ್ತಾಂಶ ಕಳವು ಪ್ರಕರಣದ ಬಗ್ಗೆ ಚುನಾವಣಾ ಆಯೋ ಗಕ್ಕೆ ನಾವು ದೂರು ಕೊಟ್ಟಿದ್ದೇವೆಂದು ಬಿಜೆಪಿಯವರೂ ದೂರು ಕೊಟ್ಟಿದ್ದಾರೆ. ಅದಕ್ಕೆ ಏನಾ ದರೂ ಅರ್ಥ ಇದೆಯೇ. ಅವರು ಹೀಗೆ ಮಾಡಿದರೆ ಮುಕ್ತ ಚುನಾವಣೆ ಬಗ್ಗೆ ಆತಂಕ ಉಂಟಾಗುವುದಿಲ್ಲವೇ’ ಎಂದು ಪ್ರಶ್ನಿಸಿದರು.</p>.<p>‘ಬಿಜೆಪಿಯವರು ಈ ರೀತಿ ಮಾಡುವುದನ್ನು ನೋಡಿದರೆ ಮುಕ್ತ ಚುನಾವಣೆ ನಡೆಯಲಿದೆಯೆ ಅನಿಸುತ್ತದೆಯೇ? ಅಧಿಕಾರದಲ್ಲಿ ಇರುವವರು ಯಾರು? ಮಾತೆತ್ತಿದರೆ ನಿಮ್ಮ ಅವಧಿಯಲ್ಲಿ ಆಗಿರಲಿಲ್ಲವೇ ಎಂದು ಹೇಳುತ್ತಾರೆ. ಪ್ರಕರಣದ ತೀವ್ರತೆ ಗಂಭೀರವಾಗಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಘುವಾಗಿ ಮಾತನಾಡುತ್ತಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>