<p><strong>ಬೆಂಗಳೂರು:</strong> ಮತದಾನದ ಮೂಲಕ ಬಲಿಷ್ಠ ಪ್ರಜಾಪ್ರಭುತ್ವವನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಮೆರೆಯಬೇಕು ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ಸೂರ್ಯಸೇನ್ ಹೇಳಿದರು.</p>.<p>ನಗರದ ಭಾರತೀಯ ವಿದ್ಯಾಭವನದಲ್ಲಿ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬಿ-ಪ್ಯಾಕ್ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ನಾನು ಪ್ರಜಾಪ್ರಭುತ್ವದ ರಾಯಭಾರಿ, ನೀವು?’ ಎಂಬ ಮತದಾರರ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಪ್ರಜಾಪ್ರಭುತ್ವದ ಉಳಿವಿಗಾಗಿ ಮತದಾನದಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ಯೋಧರಾಗಬೇಕು. ಬೂತ್ ಮಟ್ಟಗಳಲ್ಲಿ ಮತದಾನವನ್ನು ಪ್ರೋತ್ಸಾಹಿಸಲು ಹಾಗೂ ದಿವ್ಯಾಂಗರ ಸಹಾಯಕ್ಕಾಗಿ ಸ್ಥಳೀಯರ ಸಮಿತಿಗಳನ್ನು ಬಳಸಿಕೊಳ್ಳಲು ಚುನಾವಣಾ ಆಯೋಗ ನಿರ್ಧರಿಸಿದೆ. ಜನರಲ್ಲಿ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಆಯೋಗದ ಮುಖ್ಯ ಉದ್ದೇಶಗಳಲ್ಲೊಂದು. ರಾಜ್ಯದಾದ್ಯಂತ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು’ ಎಂದರು.</p>.<p>ಬಿಬಿಎಂಪಿ ಚುನಾವಣೆ ಸಹಾಯಕ ಆಯುಕ್ತ ಡಾ.ಡಿ.ಬಿ.ನಟೇಶ್ ಅವರು ಚುನಾವಣೆಯ ರೀತಿ ಹಾಗೂ ಚುನಾವಣಾಧಿಕಾರಿಗಳ ಜವಾಬ್ದಾರಿಯನ್ನು ವಿವರಿಸಿದರು.</p>.<p>ಬಿ-ಪ್ಯಾಕ್ ಸಂಸ್ಥೆಯ ಪ್ರತಿನಿಧಿ ಆನಂದ್ ತೀರ್ಥ ಮಾತನಾಡಿದರು. ಬಳಿಕ ಸಂವಾದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮತದಾನದ ಮೂಲಕ ಬಲಿಷ್ಠ ಪ್ರಜಾಪ್ರಭುತ್ವವನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಮೆರೆಯಬೇಕು ಎಂದು ಜಂಟಿ ಮುಖ್ಯ ಚುನಾವಣಾಧಿಕಾರಿ ಸೂರ್ಯಸೇನ್ ಹೇಳಿದರು.</p>.<p>ನಗರದ ಭಾರತೀಯ ವಿದ್ಯಾಭವನದಲ್ಲಿ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬಿ-ಪ್ಯಾಕ್ ಸಂಸ್ಥೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ‘ನಾನು ಪ್ರಜಾಪ್ರಭುತ್ವದ ರಾಯಭಾರಿ, ನೀವು?’ ಎಂಬ ಮತದಾರರ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.</p>.<p>‘ಪ್ರಜಾಪ್ರಭುತ್ವದ ಉಳಿವಿಗಾಗಿ ಮತದಾನದಲ್ಲಿ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ಯೋಧರಾಗಬೇಕು. ಬೂತ್ ಮಟ್ಟಗಳಲ್ಲಿ ಮತದಾನವನ್ನು ಪ್ರೋತ್ಸಾಹಿಸಲು ಹಾಗೂ ದಿವ್ಯಾಂಗರ ಸಹಾಯಕ್ಕಾಗಿ ಸ್ಥಳೀಯರ ಸಮಿತಿಗಳನ್ನು ಬಳಸಿಕೊಳ್ಳಲು ಚುನಾವಣಾ ಆಯೋಗ ನಿರ್ಧರಿಸಿದೆ. ಜನರಲ್ಲಿ ಚುನಾವಣೆ ಪ್ರಕ್ರಿಯೆಗಳ ಬಗ್ಗೆ ಜಾಗೃತಿ ಮೂಡಿಸುವುದು ಆಯೋಗದ ಮುಖ್ಯ ಉದ್ದೇಶಗಳಲ್ಲೊಂದು. ರಾಜ್ಯದಾದ್ಯಂತ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು’ ಎಂದರು.</p>.<p>ಬಿಬಿಎಂಪಿ ಚುನಾವಣೆ ಸಹಾಯಕ ಆಯುಕ್ತ ಡಾ.ಡಿ.ಬಿ.ನಟೇಶ್ ಅವರು ಚುನಾವಣೆಯ ರೀತಿ ಹಾಗೂ ಚುನಾವಣಾಧಿಕಾರಿಗಳ ಜವಾಬ್ದಾರಿಯನ್ನು ವಿವರಿಸಿದರು.</p>.<p>ಬಿ-ಪ್ಯಾಕ್ ಸಂಸ್ಥೆಯ ಪ್ರತಿನಿಧಿ ಆನಂದ್ ತೀರ್ಥ ಮಾತನಾಡಿದರು. ಬಳಿಕ ಸಂವಾದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>