ಬಜೆಟ್ ಅಧಿವೇಶನ ವ್ಯರ್ಥವಾಗಿದ್ದಕ್ಕೆ ಅನಂತಕುಮಾರ್ ಅವರು ಕಾಂಗ್ರೆಸ್ ನಾಯಕರನ್ನು ಹೊಣೆ ಮಾಡಲು ಮುಂದಾದಾಗ, ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಆಕ್ರೋಶಗೊಂಡಿದ್ದರು. ಇದೇ ವೇಳೆ ಖರ್ಗೆ ಅವರು ವಾಗ್ದಾಳಿಗೆ ಮುಂದಾದರು. ‘ಕಾಂಗ್ರೆಸ್ ನಾಯಕರು ಚರ್ಚೆಗೆ ಸಿದ್ಧರಿದ್ದರು. ಸದನದಲ್ಲಿ ಶಾಂತಿ ಕಾಪಾಡುವ ಹೊಣೆ ಸರ್ಕಾರದ್ದಾಗಿತ್ತು’ ಎಂದು ಖರ್ಗೆ ಹೇಳಿದರು.