<p><strong>ಬೆಂಗಳೂರು:</strong>ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಫ್ಲೈನ್ ಪರೀಕ್ಷೆಯ ಜತೆಗೆ ಆನ್ಲೈನ್ ಪರೀಕ್ಷೆಯನ್ನು ಒಂದು ಆಯ್ಕೆಯಾಗಿ ಪರಿಗಣಿಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ(ವಿಟಿಯು)ಹೈಕೋರ್ಟ್ ಗುರುವಾರ ಸೂಚಿಸಿದೆ.</p>.<p>‘ಸೆಪ್ಟೆಂಬರ್ 15ರಿಂದ ಪರೀಕ್ಷೆ ಆರಂಭವಾಗಲಿದ್ದು, ನಿರ್ಧಾರ ತೆಗೆದುಕೊಳ್ಳಲು ವಿಶ್ವವಿದ್ಯಾಲಯಕ್ಕೆ ಇನ್ನೂ ಸಾಕಷ್ಟು ಸಮಯ ಇದೆ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p>.<p>ಸೆಪ್ಟೆಂಬರ್ ಅಂತ್ಯದೊಳಗೆಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಯುಜಿಸಿ ನೀಡಿರುವ ನಿರ್ದೇಶನ ಪ್ರಶ್ನಿಸಿಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.</p>.<p>‘ಆನ್ಲೈನ್ ಪರೀಕ್ಷೆ ನಡೆಸಲು ತಜ್ಞರ ನೆರವು ಪಡೆಯಬೇಕು. ಈ ಸಂಬಂಧತನ್ನ ನಿರ್ಧಾರವನ್ನು ಕೂಡಲೇ ತಿಳಿಸಬೇಕು ಎಂದು ವಿಶ್ವ ವಿದ್ಯಾಲಯಕ್ಕೆ ನ್ಯಾಯಪೀಠ ತಿಳಿಸಿತು.ಕುಂದು ಕೊರತೆಗಳ ಪರಿಹಾರಕ್ಕೆ ಗೊತ್ತುಪಡಿಸಿದ ಅಧಿಕಾರಿಗಳ ಸಂಪರ್ಕ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವಂತೆಯೂ ವಿಟಿಯುಗೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಆಫ್ಲೈನ್ ಪರೀಕ್ಷೆಯ ಜತೆಗೆ ಆನ್ಲೈನ್ ಪರೀಕ್ಷೆಯನ್ನು ಒಂದು ಆಯ್ಕೆಯಾಗಿ ಪರಿಗಣಿಸುವಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ(ವಿಟಿಯು)ಹೈಕೋರ್ಟ್ ಗುರುವಾರ ಸೂಚಿಸಿದೆ.</p>.<p>‘ಸೆಪ್ಟೆಂಬರ್ 15ರಿಂದ ಪರೀಕ್ಷೆ ಆರಂಭವಾಗಲಿದ್ದು, ನಿರ್ಧಾರ ತೆಗೆದುಕೊಳ್ಳಲು ವಿಶ್ವವಿದ್ಯಾಲಯಕ್ಕೆ ಇನ್ನೂ ಸಾಕಷ್ಟು ಸಮಯ ಇದೆ’ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.</p>.<p>ಸೆಪ್ಟೆಂಬರ್ ಅಂತ್ಯದೊಳಗೆಪರೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಯುಜಿಸಿ ನೀಡಿರುವ ನಿರ್ದೇಶನ ಪ್ರಶ್ನಿಸಿಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.</p>.<p>‘ಆನ್ಲೈನ್ ಪರೀಕ್ಷೆ ನಡೆಸಲು ತಜ್ಞರ ನೆರವು ಪಡೆಯಬೇಕು. ಈ ಸಂಬಂಧತನ್ನ ನಿರ್ಧಾರವನ್ನು ಕೂಡಲೇ ತಿಳಿಸಬೇಕು ಎಂದು ವಿಶ್ವ ವಿದ್ಯಾಲಯಕ್ಕೆ ನ್ಯಾಯಪೀಠ ತಿಳಿಸಿತು.ಕುಂದು ಕೊರತೆಗಳ ಪರಿಹಾರಕ್ಕೆ ಗೊತ್ತುಪಡಿಸಿದ ಅಧಿಕಾರಿಗಳ ಸಂಪರ್ಕ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸುವಂತೆಯೂ ವಿಟಿಯುಗೆ ನಿರ್ದೇಶನ ನೀಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>